ಕೃಷ್ಣ, ಮೊಯ್ಲಿ ನಂತರ ಮೂವರಿಗೆ ಅದೃಷ್ಟ?

ಕೋಲಾರ ಕ್ಷೇತ್ರದಿಂದ ಸತತ ಆರನೇ ಬಾರಿಗೆ ಆಯ್ಕೆಯಾಗಿರುವ ಕೆ ಎಚ್ ಮುನಿಯಪ್ಪ ಮತ್ತು ಆಸ್ಕರ್ ಫರ್ನಾಂಡೀಸ್ ಅವರಿಗೂ ಕೇಂದ್ರ ಸಂಪುಟದಲ್ಲಿ ಅವಕಾಶ ದೊರೆಯುವ ನಿರೀಕ್ಷೆಯಿದೆ. ಈ ಮೂಲಕ ಪ್ರಥಮ ಬಾರಿಗೆ ರಾಜ್ಯದ ಐವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಕ್ಕಂತಾಗುತ್ತದೆ.
ಈ ಕುರಿತು ಪ್ರತಕ್ರಿಯೆ ನೀಡಿರುವ ಮಲ್ಲಿಕಾರ್ಜನ ಖರ್ಗೆ, ಪಕ್ಷದ ಹೈಕಮಾಂಡ್ ನಿಂದ ದೂರವಾಣಿ ಕರೆ ಬಂದಿರುವುದನ್ನು ಖಚಿತಪಡಿಸಿದರು. ನಾಳೆ ನಡೆಯಲಿರುವ ಎರಡನೇ ಹಂತದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ಕೇಂದ್ರ ಸರಕಾರದ ಸಂಪುಟದಲ್ಲಿ ಸ್ಥಾನ ದೊರೆಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ದೇಶ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಹೈಕಮಾಂಡ್ ಗೆ ಕೃತಜ್ಞತೆ ಸಲ್ಲಿಸಿದರು. ಸಚಿವ ಖಾತೆಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸುವುದಾಗಿ ಖರ್ಗೆ ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಹರ್ಷ ಮನೆಮಾಡಿದ್ದು, ಕಾಂಗ್ರೆಸ್ ಮುಖಂಡರಾದ ವಿ ಎಸ್ ಉಗ್ರಪ್ಪ, ಟಿ ಬಿ ಜಯಚಂದ್ರ, ವಿಶ್ವನಾಥ್ ಅವರು ಖರ್ಗೆ ಅವರಿಗೆ ಶುಭ ಹಾರೈಸಿದರು.
ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಖರ್ಗೆ ಅವರಿಗೆ ಕೇಂದ್ರದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಕ್ಕಿರಲಿಲ್ಲ. ರಾಜ್ಯದ ಪ್ರತಿಪಕ್ಷದ ನಾಯಕನಾಗಿದ್ದ ಖರ್ಗೆ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಸ್ಪರ್ಧಿಸಿದ್ದರು. ಖರ್ಗೆ ಸತತ 10ನೇ ಬಾರಿ ಚುನಾವಣೆಯಲ್ಲಿ ಆಯ್ಕೆಯಾದ ರಾಜ್ಯ ಏಕೈಕ ನಾಯಕ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications