ಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ ಸ್ಥಾನ ಕೊಡಿ ಎಂದು ಯಾರನ್ನೂ ಕೇಳಿಲ್ಲ ಎಂದರು. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲೆಂದು ಜನತೆ ನನ್ನನ್ನು ಲೋಕಸಭೆ ಆಯ್ಕೆ ಮಾಡಿದ್ದಾರೆ. ಈ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಷಯ ಶುದ್ಧ ಸುಳ್ಳು ಎಂದು ಅವರು ಹೇಳಿದರು.
ರಾಜ್ಯದ ಎಲ್ಲ ಘಟಕಗಳನ್ನು ವಿಸರ್ಜನೆ ಮಾಡಿ ಚುನಾವಣೆ ಮೂಲಕ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದಕ್ಕೂ ಮುನ್ನ ಮೂರ್ನಾಲ್ಕು ದಿನಗಳಲ್ಲಿ ಹಿರಿಯ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications