ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಲ್.ಬಿ.ರಾಜಶೇಖರ್
ಚಿತ್ರದುರ್ಗ,ಮೇ.27: ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಲ್.ಬಿ.ರಾಜಶೇಖರ್ರವರು ಇದೇ ಮೇ.25 ರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಎರಡನೇ ಅವಧಿಯ ಅಧಿಕಾರವು ಇದೇ ಮೇ 25 ಕ್ಕೆ ಕೊನೆಗೊಂಡಿದ್ದು ಸರ್ಕಾರವು 3 ನೇ ಅವಧಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿದೆ.
ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವುದರಿಂದ ಸರ್ಕಾರವು ತೀರ್ಮಾನ ಮಾಡುವವರೆಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರು ಜಿ.ಪಂ. ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಕಾರ್ಯಭಾರವನ್ನು ವಹಿಸಿಕೊಳ್ಳಲು ಕಾಯಿದೆಯನ್ವಯ ಅವಕಾಶವಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಇದರಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಲ್.ಬಿ.ರಾಜಶೇಖರ್ರವರು ಜಿ.ಪಂ. ಅಧ್ಯಕ್ಷರ ಅಧಿಕಾರ ಮತ್ತು ಕರ್ತವ್ಯವನ್ನು ನಿರ್ವಹಿಸುವರೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಪಿ.ಪ್ರಕಾಶ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ದಟ್ಸ್ ಕನ್ನಡವಾರ್ತೆ)












Click it and Unblock the Notifications