ವಿಧಾನಸಭೆ ಜೆಡಿಎಸ್ ನಾಯಕನಾಗಿ ರೇವಣ್ಣ ?
ಬೆಂಗಳೂರು, ಮೇ.28 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಎಚ್ ಡಿ ಕುಮಾರಸ್ವಾಮಿ ಮೇ 31ರೊಳಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರಿಂದ ಜೆಡಿಎಸ್ ನಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದ್ದು, ಮೂಲಗಳು ಪ್ರಕಾರ ಜೆಡಿಎಸ್ ಪಕ್ಷದ ನಾಯಕರಾಗಿ ಎಚ್ ಡಿ ರೇವಣ್ಣ, ಉಪನಾಯಕರಾಗಿ ಬಂಡೆಪ್ಪ ಕಾಶೆಂಪೂರ್ ನೇಮಕಗೊಳ್ಳುವ ಸಂಭವವಿದೆ.
ಮೇ. 30 ರಂದು ನಡೆಯಲಿರುವ ಶಾಸಕಾಂಗ ಸಭೆ ನಾಯಕನ ಆಯ್ಕೆ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆ ಜೊತೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆ, ವಿಧಾನಮಂಡಲದಲ್ಲಿ ಪಕ್ಷ ನಡೆಸಬೇಕಾದ ಹೋರಾಟದ ಕಾರ್ಯತಂತ್ರ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಹಿನ್ನೆಲೆಯಲ್ಲಿ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications