ಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು

ಮಲ್ಲಿಕಾರ್ಜುನ ನರ್ಸಿಂಗ್ ಹೋಂನ ಡಾ|.ಶ್ರೀನಾಥ್ರವರ ಮಗ ಹಾಗೂ ಆತನ ಸ್ನೇಹಿತನಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (ಕೆಎ13,ಎಂ6864) ಜ್ಯೂಯಲ್ ರಾಕ್ ರಸ್ತೆಯಿಂದ ಎಲ್.ಎಲ್.ಆರ್.ರಸ್ತೆ ಕಡೆಗೆ ಅತಿವೇಗವಾಗಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ಆಟೋರಿಕ್ಷಾದಲ್ಲಿ ಪ್ರಯಾಣ ಮಾಡುತ್ತಿದ್ದ, ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭಿಷೇಕ್ಗೆ ಭುಜ ಸೇರಿದಂತೆ ಹಲವೆಡೆ ತೀವ್ರ ಗಾಯಗಳಾಗಿವೆ.
ಅಪಘಾತ ಸಂಭವಿಸಿದ ಕೂಡಲೇ ಸುತ್ತಮುತ್ತಲಿನ ಜನರೆಲ್ಲಾ ಒಗ್ಗೂಡಿ, ಕಾರಿನಿಂದ ಡಾ| ಶ್ರೀನಾಥ್ರವರ ಮಗ ಮತ್ತು ಆತನ ಸ್ನೇಹಿತನನ್ನು ಹೊರಕ್ಕೆಳೆದು ಕಾರನ್ನು ಸೈಜುಗಲ್ಲುಗಳಿಂದ ಪುಡಿಪುಡಿ ಮಾಡಿದರು. ಅಲ್ಲಿಗೆ ಆಗಮಿಸಿದ ಟ್ರಾಫಿಕ್ ಪೊಲೀಸರು ಕಾರನ್ನು ಘಟನೆಯ ಸ್ಥಳದಿಂದ ಬೇರೆ ಕಡೆಗೆ ಒಯ್ಯಲು ಪ್ರಯತ್ನಿಸಿದಾಗ ಒಗ್ಗೂಡಿದ್ದ ಗುಂಪು ಪೊಲೀಸರ ಕ್ರಮವನ್ನು ವಿರೋಧಿಸಿತು. ಆಗ ಪೊಲೀಸರಿಗೂ ಹಾಗೂ ಸ್ಥಳದಲ್ಲಿದ್ದ ಹಲವರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟದ ಮಟ್ಟಕ್ಕೆ ಹೋಯಿತು. ಈ ಘಟನೆಯಲ್ಲಿ ಹೊಯ್ಸಳ ವಾಹನದ ಚಾಲಕ ಸತ್ಯನಾರಾಯಣ್, ಟ್ರಾಫಿಕ್ ಪೊಲೀಸ್ ಠಾಣೆಯ ಸಹಾಯಕ ಸಬ್ಇನ್ಸ್ಪೆಕ್ಟರ್ ವಾಸು ಸೇರಿದಂತೆ ಕೆಲವರಿಗೆ ಹೊಡೆತ ಬಿದ್ದವು. ಇದರಿಂದ ಕೋಪಗೊಂಡ ಪೊಲೀಸರು ಸಹ ಲಾಠಿ ಚಾರ್ಜ್ ಮಾಡಿದರು. ಎ.ಎಸೈ. ವಾಸುರವರ ಲಾಠಿಯ ಏಟಿನಿಂದ ನಾಮನಿರ್ದೇಶಿತ ನಗರಸಭಾ ಸದಸ್ಯ ಶಿವಣ್ಣರಿಗೆ ತೀವ್ರತರದ ಗಾಯಗಳಾಗಿವೆ. ಶಿವಣ್ಣನನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೊಳಪಡಿಸಲಾಗಿದೆ.
ಗಾಯಗೊಂಡಿರುವ ಅಭಿಷೇಕ್ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೌನ್ಸಿಲರ್ ಶಿವಣ್ಣ ಸಹ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications