ಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು

ಮಲ್ಲಿಕಾರ್ಜುನ ನರ್ಸಿಂಗ್ ಹೋಂನ ಡಾ|.ಶ್ರೀನಾಥ್ರವರ ಮಗ ಹಾಗೂ ಆತನ ಸ್ನೇಹಿತನಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (ಕೆಎ13,ಎಂ6864) ಜ್ಯೂಯಲ್ ರಾಕ್ ರಸ್ತೆಯಿಂದ ಎಲ್.ಎಲ್.ಆರ್.ರಸ್ತೆ ಕಡೆಗೆ ಅತಿವೇಗವಾಗಿ ಬಂದು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ಆಟೋರಿಕ್ಷಾದಲ್ಲಿ ಪ್ರಯಾಣ ಮಾಡುತ್ತಿದ್ದ, ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭಿಷೇಕ್ಗೆ ಭುಜ ಸೇರಿದಂತೆ ಹಲವೆಡೆ ತೀವ್ರ ಗಾಯಗಳಾಗಿವೆ.
ಅಪಘಾತ ಸಂಭವಿಸಿದ ಕೂಡಲೇ ಸುತ್ತಮುತ್ತಲಿನ ಜನರೆಲ್ಲಾ ಒಗ್ಗೂಡಿ, ಕಾರಿನಿಂದ ಡಾ| ಶ್ರೀನಾಥ್ರವರ ಮಗ ಮತ್ತು ಆತನ ಸ್ನೇಹಿತನನ್ನು ಹೊರಕ್ಕೆಳೆದು ಕಾರನ್ನು ಸೈಜುಗಲ್ಲುಗಳಿಂದ ಪುಡಿಪುಡಿ ಮಾಡಿದರು. ಅಲ್ಲಿಗೆ ಆಗಮಿಸಿದ ಟ್ರಾಫಿಕ್ ಪೊಲೀಸರು ಕಾರನ್ನು ಘಟನೆಯ ಸ್ಥಳದಿಂದ ಬೇರೆ ಕಡೆಗೆ ಒಯ್ಯಲು ಪ್ರಯತ್ನಿಸಿದಾಗ ಒಗ್ಗೂಡಿದ್ದ ಗುಂಪು ಪೊಲೀಸರ ಕ್ರಮವನ್ನು ವಿರೋಧಿಸಿತು. ಆಗ ಪೊಲೀಸರಿಗೂ ಹಾಗೂ ಸ್ಥಳದಲ್ಲಿದ್ದ ಹಲವರ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಟದ ಮಟ್ಟಕ್ಕೆ ಹೋಯಿತು. ಈ ಘಟನೆಯಲ್ಲಿ ಹೊಯ್ಸಳ ವಾಹನದ ಚಾಲಕ ಸತ್ಯನಾರಾಯಣ್, ಟ್ರಾಫಿಕ್ ಪೊಲೀಸ್ ಠಾಣೆಯ ಸಹಾಯಕ ಸಬ್ಇನ್ಸ್ಪೆಕ್ಟರ್ ವಾಸು ಸೇರಿದಂತೆ ಕೆಲವರಿಗೆ ಹೊಡೆತ ಬಿದ್ದವು. ಇದರಿಂದ ಕೋಪಗೊಂಡ ಪೊಲೀಸರು ಸಹ ಲಾಠಿ ಚಾರ್ಜ್ ಮಾಡಿದರು. ಎ.ಎಸೈ. ವಾಸುರವರ ಲಾಠಿಯ ಏಟಿನಿಂದ ನಾಮನಿರ್ದೇಶಿತ ನಗರಸಭಾ ಸದಸ್ಯ ಶಿವಣ್ಣರಿಗೆ ತೀವ್ರತರದ ಗಾಯಗಳಾಗಿವೆ. ಶಿವಣ್ಣನನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೊಳಪಡಿಸಲಾಗಿದೆ.
ಗಾಯಗೊಂಡಿರುವ ಅಭಿಷೇಕ್ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೌನ್ಸಿಲರ್ ಶಿವಣ್ಣ ಸಹ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications