ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ

By Staff
|
Google Oneindia Kannada News

Dharmasthala
ಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. ಹರೀಶ್ ಕುಮಾರ್ ಕೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದ ಆಂಧ್ರ ಪೊಲೀಸರು ನಡೆಸಿದ ಗೋಲಿಬಾರ್‌ನಿಂದ ಸಂಭವಿಸಿದ ದುರ್ಘಟನೆ ಬಗ್ಗೆ ತನಿಖೆ ನಡೆಸಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಶೀ ವಿ. ಪೊನ್ನುರಾಜ್ ಆದೇಶಿಸಿದ್ದರು. ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪುತ್ತೂರು ಉಪವಿಭಾಗಾಧಿಕಾರಿಗಳು ನಡೆಸುತ್ತಿದ್ದು, ಈ ಘಟನೆ ಬಗ್ಗೆ ಮಾಹಿತಿ ಉಳ್ಳ ಅಥವಾ ಪ್ರತ್ಯಕ್ಷ ನೋಡಿದವರು ಜೂನ್ 17ರಂದು ಇವರೆದುರು ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ದಾಖಲಿಸಬಹುದಾಗಿದೆ.
(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X