ಅಪೊಲೊ ಆಸ್ಪತ್ರೆಯಲ್ಲಿ ಮಹಿಳೆ ದಾರುಣ ಕೊಲೆ
ಬೆಂಗಳೂರು, ಮೇ.30: ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯ ಪ್ರಯೋಗಾಲಯ ತಂತ್ರಜ್ಞೆ, ಕೇರಳ ಮೂಲದ ಜಿತಿನ್ ಜಾರ್ಜ್ (26) ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ದಾರುಣ ಘಟನೆ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮೈಕ್ರೊಬಯಾಲಜಿ ಪ್ರಯೋಗಾಲಯದಲ್ಲಿ ಜಿತಿನ್ ರಾತ್ರಿ ಪಾಳೆಯದಲ್ಲಿ ಕೆಲಸ ಮಾಡುತ್ತಿದ್ದರು.
ಆಸ್ಪತ್ರೆಯಲ್ಲಿ ಪ್ರಯೋಗಾಲಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಪಳನಿ (24)ಎಂಬುವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜಿತಿನ್ ಅವರನ್ನು ಮದುವೆಯಾಗುವಂತೆ ಪಳನಿ ಎಂಬಾತ ಪೀಡಿಸುತ್ತಿದ್ದ ಎನ್ನಲಾಗಿದೆ.
ಬೆಳಗಿನ ಪಾಳಿ ಕೆಲಸ ಮುಗಿಸಿ ಮತ್ತೆ ರಾತ್ರಿ ಪಾಳಿ ಕೆಲಸಕ್ಕೆ ಪಳನಿ ಬಂದಿದ್ದ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಜಿತಿನ್ ಜತೆ ಆತ ಮಾತನಾಡುತ್ತಿದ್ದನ್ನು ಆಸ್ಪತ್ರೆಯ ಕೆಲವು ಸಿಬ್ಬಂದಿ ನೋಡಿದ್ದಾರೆ. ಬೆಳಗ್ಗೆ ಆಸ್ಪತ್ರೆಗೆ ಬಂದ ಸಿಬ್ಬಂದಿ ಜಿತಿನ್ ಕೆಳಗೆ ಬಿದ್ದಿರುವುದನ್ನು ನೋಡಿ ಮಾತನಾಡಿಸಲು ಯತ್ನಿಸಿದ್ದಾರೆ. ಆಗ ಕೊಲೆಯಾಗಿದ್ದಾರೆ ಎಂದು ತಿಳಿದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಸೂಕ್ಷ್ಮ ಜೀವ ವಿಜ್ಞಾನದಲ್ಲಿ ಜಿತಿನ್ ಎಂಎಸ್ಸಿ ಮುಗಿಸಿದ್ದರು. ಕಾಲೇಜಿನಲ್ಲಿ ಓದುತ್ತ್ತಿರುವಾಗಲೇ ಅವರಿಗೆ ಪಳನಿಯ ಪರಿಚಯವಾಗಿತ್ತು. ಒಂದೂವರೆ ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ಜಿತಿನ್ ನಾರಾಯನ ಹೃದಯಾಲಯದಲ್ಲಿ ಕೆಲಸಕ್ಕೆ ಸೇರಿದ್ದರು.
ಪಳನಿ ಸಹ ಅಲ್ಲೇ ಕೆಲಸ ಮಾಡುತ್ತಿದ್ದ.ಜಿತಿನ್ ರನ್ನು ಮದುವೆಯಾಗುವಂತೆ ಪಳನಿ ಬಹಳಷ್ಟು ಪೀಡಿಸುತ್ತಿದ್ದ ಆದರೆ ಜಿತಿನ್ ಗೆ ಪಳನಿಯನ್ನು ಮದುವೆಯಾಗಲು ಇಷ್ಟವಿರಲಿಲ್ಲ.ಕೊನೆಗೆ ಇದು ಕೊಲೆಯಲ್ಲಿ ಪರಿಸಮಾಪ್ತಿಯಾಗಿದೆ ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications