ಮನುಷ್ಯ ಜಾತಿ ತಾನೊಂದೇ ವಲಂ : ಕಲಾ ಪ್ರದರ್ಶನ
ಬೆಂಗಳೂರು, ಮೇ 30 : ಧ್ವನಿ - ಬೆಳಕು ದೃಶ್ಯ ವೈಭವಗಳ ರೂಪಕ 'ಮನುಷ್ಯ ಜಾತಿ ತಾನೊಂದೇ ವಲಂ' ಕಾರ್ಯಕ್ರಮದ ಮತ್ತೆರಡು ಪ್ರದರ್ಶನಗಳನ್ನು ರಾಜ್ಯ ವಾರ್ತಾ ಇಲಾಖೆ ನಗರದ ಲಾಲ್ಬಾಗ್ನಲ್ಲಿ ಮೇ 31 ಮತ್ತು ಜೂನ್ 1ರಂದು ಲಾಲ್ಬಾಗ್ನಲ್ಲಿ ಆಯೋಜಿಸಿದೆ.
ಲಾಲ್ಬಾಗ್ನ ಕೆಂಗಲ್ ಹನುಮಂತಯ್ಯ ಜೋಡಿ ರಸ್ತೆಯ ದ್ವಾರದ ಸಮೀಪದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಕಲಾವಿದರು ಸಂಜೆ 6.30 ಗಂಟೆಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತ.
ವಾರ್ತಾ ಇಲಾಖೆಯ ನಿರ್ದೇಶಕ ಎನ್. ಆರ್. ವಿಶು ಕುಮಾರ್ ಅವರ ಪರಿಕಲ್ಪನೆಯ ಈ ದೃಶ್ಯ ವೈಭವವನ್ನು ರಂಗಾಯಣ ಖ್ಯಾತಿಯ ಸಿ. ಬಸವಲಿಂಗಯ್ಯ ಅವರು ನಿರ್ದೇಶಿಸಿದ್ದಾರೆ. ಹೆಸರಾಂತ ರಂಗ ವಿನ್ಯಾಸಗಾರ ಪರೇಶ್ ಕುಮಾರ್ ಅವರ ಮನಪುಳಕಿಸುವ ಬೆಳಕಿನ ಲೋಕ ಮತ್ತು ಸುಪ್ರಸಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರ ಕಿವಿದುಂಬುವ ಸಂಗೀತ ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ.
ಹತ್ತನೆಯ ಶತಮಾನದ ಆದಿ ಕವಿ ಪಂಪನಿಂದ ಇಪ್ಪತ್ತನೆಯ ಶತಮಾನದ ರಾಷ್ಟ್ರಕವಿ ಕುವೆಂಪುವರೆಗೆ ಎಲ್ಲರೂ ಪ್ರತಿಪಾದಿಸಿದ್ದು ಒಂದೇ. ಅದುವೇ ಮಾನವತಾವಾದ. ಎಲ್ಲಾ ಮಾನವರೂ ಒಂದೇ ಎಂಬ ಸಾಮಾಜಿಕ ಸಂದೇಶವನ್ನು ಸಾರುವ ಈ ದೃಶ್ಯ ರೂಪಕವನ್ನು ನೋಡುಗರು ಮನದೊಳಗೆ ಹೊತ್ತು ಮನೆ ಮನೆಗೆ ಕೊಂಡೊಯ್ಯುತ್ತಾರೆ ಎಂದು ಈಗಾಗಲೇ ಹಲವು ವಿಮರ್ಶಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications