ಬೆಂಗಳೂರಿನಲ್ಲಿ ನ್ಯಾಯಾಧೀಶರತ್ತ ಚಪ್ಪಲಿ ಎಸೆತ
ಬೆಂಗಳೂರು, ಮೇ. 30 : ಚಪ್ಪಲಿ ಹಾಗೂ ಬೂಟುಗಳ ಹಾರಾಟ ಇತ್ತೀಚೆಗೆ ಪ್ರತಿಭಟನೆ ಅಸ್ತ್ರವಾಗಿ ಬಳಕೆಯಾಗುತ್ತಿದ್ದು, ಈವರೆಗೂ ಅದರ ಏಟು ತಿಂದದ್ದು ಬರೀ ಘಟಾನುಘಟಿ ರಾಜಕಾರಣಿಗಳು ಎನ್ನುವುದು ವಿಶೇಷಲಾಗಿತ್ತು. ಆದರೆ, ಇಂದು ಬೆಂಗಳೂರಿನ ಡಬ್ಬಲ್ ರಸ್ತೆಯಲ್ಲಿರುವ ಕಾರ್ಮಿಕರ ನ್ಯಾಯಾಲಯದಲ್ಲಿ ನ್ಯಾಯಧೀಶರತ್ತ ವ್ಯಕ್ತಿಯೊಬ್ಬ ಚಪ್ಪಲಿ ಎಸೆದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನ್ನ ವಿರುದ್ಧ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆರೋಪಿ ಬಿಹಾರ್ ಮೂಲದ ನಂದಾಲಾಲ್ ಎಂಬುವವನು ನ್ಯಾಯಾಧೀಶರತ್ತ ಚಪ್ಪಲಿ ಎಸೆದಿದ್ದಾನೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ನಂದಾಲಾಲ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಕಳೆದ 20 ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ವಿರುದ್ಧ ಲೇಬರ್ ನ್ಯಾಯಾಲಯದಿಂದ ಹೊರಬಂದಿತ್ತು. ಇದರಿಂದ ಕೆರಳಿದ ನಂದಾಲಾಲ್ ನ್ಯಾಯಾಧೀಶರತ್ತ ಚಪ್ಪಲಿ ಎಸೆದಿದ್ದಾನೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.
ಚಪ್ಪಲಿ ಮತ್ತು ಬೂಟು ಎಸೆತಗಳ ಭರಾಟೆ ಆರಂಭವಾಗಿದ್ದು ಕಳೆದ ವರ್ಷ ಅಮೆರಿಕದ ಅಧ್ಯಕ್ಷ ಜಾರ್ಜ್ ಬುಷ್ ಅವರಿಂದ. ಅಲ್ಲಿಂದ ಶುರುವಾದ ಈ ಪೀಡೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ, ಗೃಹ ಸಚಿವ ಪಿ ಚಿದಂಬರಂ, ನವೀನ ಜಿಂದಾಲ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಇದರ ಬಿಸಿ ತಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications