ಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್

"ಸಿಎಂ ಮೇಲೆ ರೆಡ್ಡಿ ಸಹೋದರರಿಗೆ ಅಸಮಾಧಾನವಿದೆ. ಸದ್ಯದಲ್ಲೇ ಬಿಜೆಪಿ ವರಿಷ್ಠರಿಂದ ಭಿನ್ನಮತ ಸ್ಫೋಟಗೊಳ್ಳಲಿದೆ. ನಾನು ಎಂದೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಶಿಸ್ತು ಸಮಿತಿ ಶಿಫಾರಸು ಇಲ್ಲ. ಬಹುಶಃ ಹೈ ಕಮಾಂಡ್ ಗಮನಕ್ಕೆ ಬರದೇ ರಾಜ್ಯಾಧ್ಯಕ್ಷರು ಕ್ರಮ ಕೈಗೊಂಡಿದ್ದಾರೆ. ಮೊದಲು ನನ್ನ ಬಹಿಷ್ಕಾರ ಮಾಡಲು ಸರಿ ಕಾರಣ ನೀಡಲಿ" ಎಂದು ಯತ್ನಾಳ್ ಸವಾಲೆಸಿದಿದ್ದಾರೆ. ಉಚ್ಚಾಟನೆ ಕ್ರಮವನ್ನು ಪ್ರಶ್ನಿಸಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
ಉತ್ತರ ಕರ್ನಾಟಕ ಮೂಲದ ನಾಯಕರಿಗೆಗೆ ಈ ಬಾರಿ ಸಿಎಂ ಆಗುವ ಯೋಗ ಒದಗಲಿದೆ. ಸಿಎಂ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿ, ಅಪರೇಷನ್ ಕಮಲ, ವರ್ಗಾವಣೆ ದಂಧೆಯ ಮೂಲ ಸ್ಥಾನ ಸಿಎಂ ಅವರ ಕುಟುಂಬ ಎಂದಿದ್ದಾರೆ. ರಾಜ್ಯದ ಲಿಂಗಾಯತ ಮುಖಂಡರನ್ನು ಒಡೆಯುವ ತಂತ್ರವನ್ನು ಸಿಎಂ ಅನುಸರಿಸುತ್ತಿದ್ದಾರೆ ಎಂದಿದ್ದಾರೆ. 40 ಕ್ಕೂ ಅಧಿಕ ಜನ ಶಾಸಕ, ಸಂಸದರ ಬೆಂಬಲ ಇದೆ. ರೇಣುಕಾಚಾರ್ಯ, ಈಶ್ವರಪ್ಪ , ರೆಡ್ಡಿ ಸಹೋದರರ ಬೆಂಬಲ ನನಗಿದೆ. ಮಂತ್ರಿಗಳಿಗೆ ಹೆಚ್ಚಿನ ಅಧಿಕಾರ ನೀಡಿಲ್ಲ. ಎಲ್ಲೆಡೆ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರ ಹೆಸರು ರಾರಾಜಿಸುತ್ತಿದೆ.
ಈಶ್ವರಪ್ಪ ಸ್ಪಷ್ಟನೆ: ಈ ಮಧ್ಯೆ ಇಂದಿನ ವಿಕಾಸ ಸಂಕಲ್ಪ ಸಮಾವೇಶಕ್ಕೆ ಗೈರು ಹಾಜರಾಗಿರುವ ಸಚಿವ ಕೆ.ಎಸ್ .ಈಶ್ವರಪ್ಪ ಶಿವಮೊಗ್ಗದಲ್ಲಿ ಮಾತನಾಡಿ, ಈ ಬಗ್ಗೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ವರಿಷ್ಠರಿಗೆ, ಪಕ್ಷದ ರಾಜ್ಯಾಧ್ಯಕ್ಷರಿಗೆ ಮೊದಲೆ ನನ್ನ ಇಂದಿನ ಕಾರ್ಯಕ್ರಮದ ಬಗ್ಗೆ ತಿಳಿಸಿದ್ದೆ. ಸಿಎಂ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ. ಈ ಮುಂಚೆ ಇತ್ತೀಚೆಗೆ ಶಿವಮೊಗ್ಗ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಂಗಾರಪ್ಪ ವಿರುದ್ಧ ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರು ಜಯಭೇರಿ ಬಾರಿಸಿ, ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲೂ ಈಶ್ವರಪ್ಪ ಅವರು ಪಾಲ್ಗೊಂಡಿರಲಿಲ್ಲ. ವಿಶೇಷವೆಂದರೆ ಪಕ್ಷದ ರಾಜ್ಯಾಧ್ಯಕ್ಷರಾದ ಸದಾನಂದ ಗೌಡ, ಸರ್ಕಾರದ ಬೆನ್ನಲುಬು ಎಂದೇ ಭಾವಿಸಲಾಗಿರುವ ರೆಡ್ಡಿ ಸಹೋದರರು,ಶ್ರೀರಾಮುಲು, ಈಶ್ವರಪ್ಪ ಸೇರಿದಂತೆ ಪ್ರಮುಖ ನಾಯಕರುಗಳು ವಿಕಾಸ ಸಂಕಲ್ಪ ದಲ್ಲಿ ಪಾಲ್ಗೊಂಡಿಲ್ಲ.
(ದಟ್ಸ್ ಕನ್ನಡವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications