ಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್

"ಸಿಎಂ ಮೇಲೆ ರೆಡ್ಡಿ ಸಹೋದರರಿಗೆ ಅಸಮಾಧಾನವಿದೆ. ಸದ್ಯದಲ್ಲೇ ಬಿಜೆಪಿ ವರಿಷ್ಠರಿಂದ ಭಿನ್ನಮತ ಸ್ಫೋಟಗೊಳ್ಳಲಿದೆ. ನಾನು ಎಂದೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಶಿಸ್ತು ಸಮಿತಿ ಶಿಫಾರಸು ಇಲ್ಲ. ಬಹುಶಃ ಹೈ ಕಮಾಂಡ್ ಗಮನಕ್ಕೆ ಬರದೇ ರಾಜ್ಯಾಧ್ಯಕ್ಷರು ಕ್ರಮ ಕೈಗೊಂಡಿದ್ದಾರೆ. ಮೊದಲು ನನ್ನ ಬಹಿಷ್ಕಾರ ಮಾಡಲು ಸರಿ ಕಾರಣ ನೀಡಲಿ" ಎಂದು ಯತ್ನಾಳ್ ಸವಾಲೆಸಿದಿದ್ದಾರೆ. ಉಚ್ಚಾಟನೆ ಕ್ರಮವನ್ನು ಪ್ರಶ್ನಿಸಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
ಉತ್ತರ ಕರ್ನಾಟಕ ಮೂಲದ ನಾಯಕರಿಗೆಗೆ ಈ ಬಾರಿ ಸಿಎಂ ಆಗುವ ಯೋಗ ಒದಗಲಿದೆ. ಸಿಎಂ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿ, ಅಪರೇಷನ್ ಕಮಲ, ವರ್ಗಾವಣೆ ದಂಧೆಯ ಮೂಲ ಸ್ಥಾನ ಸಿಎಂ ಅವರ ಕುಟುಂಬ ಎಂದಿದ್ದಾರೆ. ರಾಜ್ಯದ ಲಿಂಗಾಯತ ಮುಖಂಡರನ್ನು ಒಡೆಯುವ ತಂತ್ರವನ್ನು ಸಿಎಂ ಅನುಸರಿಸುತ್ತಿದ್ದಾರೆ ಎಂದಿದ್ದಾರೆ. 40 ಕ್ಕೂ ಅಧಿಕ ಜನ ಶಾಸಕ, ಸಂಸದರ ಬೆಂಬಲ ಇದೆ. ರೇಣುಕಾಚಾರ್ಯ, ಈಶ್ವರಪ್ಪ , ರೆಡ್ಡಿ ಸಹೋದರರ ಬೆಂಬಲ ನನಗಿದೆ. ಮಂತ್ರಿಗಳಿಗೆ ಹೆಚ್ಚಿನ ಅಧಿಕಾರ ನೀಡಿಲ್ಲ. ಎಲ್ಲೆಡೆ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರ ಹೆಸರು ರಾರಾಜಿಸುತ್ತಿದೆ.
ಈಶ್ವರಪ್ಪ ಸ್ಪಷ್ಟನೆ: ಈ ಮಧ್ಯೆ ಇಂದಿನ ವಿಕಾಸ ಸಂಕಲ್ಪ ಸಮಾವೇಶಕ್ಕೆ ಗೈರು ಹಾಜರಾಗಿರುವ ಸಚಿವ ಕೆ.ಎಸ್ .ಈಶ್ವರಪ್ಪ ಶಿವಮೊಗ್ಗದಲ್ಲಿ ಮಾತನಾಡಿ, ಈ ಬಗ್ಗೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ವರಿಷ್ಠರಿಗೆ, ಪಕ್ಷದ ರಾಜ್ಯಾಧ್ಯಕ್ಷರಿಗೆ ಮೊದಲೆ ನನ್ನ ಇಂದಿನ ಕಾರ್ಯಕ್ರಮದ ಬಗ್ಗೆ ತಿಳಿಸಿದ್ದೆ. ಸಿಎಂ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದ್ದಾರೆ. ಈ ಮುಂಚೆ ಇತ್ತೀಚೆಗೆ ಶಿವಮೊಗ್ಗ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಬಂಗಾರಪ್ಪ ವಿರುದ್ಧ ಯಡಿಯೂರಪ್ಪ ಅವರ ಮಗ ರಾಘವೇಂದ್ರ ಅವರು ಜಯಭೇರಿ ಬಾರಿಸಿ, ವಿಜಯೋತ್ಸವ ಆಚರಿಸಿದ ಸಂದರ್ಭದಲ್ಲೂ ಈಶ್ವರಪ್ಪ ಅವರು ಪಾಲ್ಗೊಂಡಿರಲಿಲ್ಲ. ವಿಶೇಷವೆಂದರೆ ಪಕ್ಷದ ರಾಜ್ಯಾಧ್ಯಕ್ಷರಾದ ಸದಾನಂದ ಗೌಡ, ಸರ್ಕಾರದ ಬೆನ್ನಲುಬು ಎಂದೇ ಭಾವಿಸಲಾಗಿರುವ ರೆಡ್ಡಿ ಸಹೋದರರು,ಶ್ರೀರಾಮುಲು, ಈಶ್ವರಪ್ಪ ಸೇರಿದಂತೆ ಪ್ರಮುಖ ನಾಯಕರುಗಳು ವಿಕಾಸ ಸಂಕಲ್ಪ ದಲ್ಲಿ ಪಾಲ್ಗೊಂಡಿಲ್ಲ.
(ದಟ್ಸ್ ಕನ್ನಡವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications