15ನೇ ಲೋಕಸಭೆಯ ಚೊಚ್ಚಲ ಅಧಿವೇಶನಕ್ಕೆ ಸಜ್ಜು

ಯುಪಿಎ ಸರಕಾರದ ಕಾರ್ಯಕ್ರಮಗಳಿಗೆ ಈ ಅಧಿವೇಶನ ವೇದಿಕೆಯಾಗಲಿದೆ. ಹಾಗೆಯೇ ರಾಷ್ಟ್ರಪತಿಗಳ ಭಾಷಣ, ಲೋಕಸಭಾಧ್ಯಕ್ಷರ ಆಯ್ಕೆ ಪ್ರಮುಖ ಅಂಶಗಳು. ಹಿರಿಯ ಲೋಕಸಭಾ ಸದಸ್ಯ ಮಾಣಿಕ್ ರಾವ್ ಗವಿಟ್(75) ಅವರನ್ನು ರಾಷ್ಟ್ರಪತಿ ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ. ಮಹಾರಾಷ್ಟ್ರದ ನಂದೂರ್ ಬಾರ್ ಕ್ಷೇತ್ರದಿಂದ 9ನೇ ಬಾರಿಗೆ ಆಯ್ಕೆಯಾಗಿರುವ ಗವಿಟ್ ಸಂಸದರಾಗಿ 27 ವರ್ಷಗಳ ಅನುಭವಿ.
ಅಧಿವೇಶನದ ಮೊದಲ ಎರಡು ದಿನ ಹೊಸದಾಗಿ ಆಯ್ಕೆಯಾಗಿರುವ 543 ಸಂಸದರು ಪ್ರಮಾಣ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಬೋಧಿಸಲು ರಾಷ್ಟ್ರಪತಿ, ನಾಲ್ಕು ಹಿರಿಯ ಸದಸ್ಯರದಾದ ಬಸುದೇವ್ ಆಚಾರಿಯಾ (ಸಿಪಿಎಂ), ಅರ್ಜುನ್ ಸಿಂಗ್ ಚರಣ್ ಸೇಥಿ (ಬಿಜೆಡಿ), ಬಿರೆನ್ ಸಿಂಗ್ ಎಂಗ್ಟಿ (ಕಾಂಗ್ರೆಸ್) ಹಾಗೂ ಸುಮಿತ್ರಾ ಮಹಾಜನ್ (ಬಿಜೆಪಿ) ಅವರ ಸಮಿತಿ ರಚಿಸಿದ್ದಾರೆ.
ಜೂ.3 ರಂದು ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ.ಜೂ.4ರಂದು ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜೂ.9ರಂದು ಮೊದಲ ಅಧಿವೇಶನ ಅಂತ್ಯವಾಗಲಿದೆ. ಜೂನ್ ಅಂತ್ಯದಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದ್ದು ನೂತನ ಸರಕಾರ2009-10ನೇ ಸಾಲಿನ ಬಜೆಟನ್ನು ಮಂಡಿಸಲಿದೆ.
(ಏಜೆನ್ಸೀಸ್)
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications