ಬಿಎಸ್ ವೈ ವಿರುದ್ಧ ಖರ್ಗೆ ಕೆಂಡಾಮಂಡಲ
ಬೆಂಗಳೂರು, ಜೂ.1: ಕೇಂದ್ರ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ ಎನ್ನುವ ಮನೋಧೋರಣೆಯನ್ನು ಬಿಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ಮನೋಭಾವ ಬೆಳೆಸಿಕೊಳ್ಳಲಿ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕೇಂದ್ರ ಸಚಿವಾರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲಬಾರಿಗೆ ರಾಜ್ಯಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಕೇಂದ್ರ ಸರಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತಾಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪ್ರತಿದಿನ ಸಾಯೋರಿಗೆ ಅಳೋರು ಯಾರು ಎನ್ನುವ ಮನಸ್ಥಿತಿ ಬೆಳೆಯಬಹುದು. ಇನ್ನು ಮುಂದಾದರೂ ತಮ್ಮ ನಿಲುವನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನ ಕೊಡಲಿ ಎಂದು ಖರ್ಗೆ ಸಲಹೆ ನೀಡಿದರು.
ಯುಪಿಎ ಸರಕಾರ ಸಣ್ಣ, ಮಧ್ಯಮ ಮತ್ತು ಬೃಹತ್ ನಗರಗಳಿಗೂ ಹಣ ಬಿಡುಗಡೆ ಮಾಡಿದೆ. ಈ ಹಣ ಶಿಕಾರಿಪುರ ಮತ್ತು ರಾಮನಗರಕ್ಕೂ ಹೋಗಿದೆ. ಸುಮ್ಮನೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪ ಮಾಡುವುದರಲ್ಲಿ ಅರ್ಥವಿಲ್ಲ.
ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವೀರಪ್ಪ ಮೊಯ್ಲಿ ಅವರ ಆರ್ ಟಿ ನಗರದ ನಿವಾಸದಲ್ಲಿ ಮತ್ತು ಸದಾಶಿವನಗರದ ಖರ್ಗೆಯವರ ನಿವಾಸಕ್ಕೆ ತೆರಳಿ ಸರಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications