ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ: ಮೊಯ್ಲಿ
ಬೆಂಗಳೂರು, ಜೂ.1: ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರಕಾರ ರಾಜ್ಯ ಸರಕಾರದ ವಿರುದ್ಧ ಯಾವುದೇ ಪಕ್ಷಪಾತ ಮಾಡುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಕಾರದಿಂದ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲಾಗುವುದೆಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯಿಲಿ ತಿಳಿಸಿದ್ದಾರೆ.
ರಾಜ್ಯದ ಬಗ್ಗೆ ಅತೀವ ಕಾಳಜಿ ಇರುವುದರಿಂದಲೇ ಯುಪಿಎ ಸರಕಾರ ರಾಜ್ಯಕ್ಕೆ ನಾಲ್ಕು ಸಚಿವ ಸ್ಥಾನಗಳನ್ನು ನೀಡಿದ್ದು, ಇದನ್ನು ನಮ್ಮ ಮಾನ್ಯ ಮುಖ್ಯಮಂತ್ರಿಗಳು ಅರ್ಥಮಾಡಿಕೊಳ್ಳಲಿ ಎಂದರು. ರಾಜ್ಯದ ಜನತೆಯ ಆಶೀರ್ವಾದದಿಂದ ಮತ್ತು ಯುಪಿಎ ಸರಕಾರ ತನ್ನ ಮೇಲೆ ವಿಶ್ವಾಸವಿಟ್ಟು ಕೇಂದ್ರ ಕಾನೂನು ಸಚಿವ ಹುದ್ದೆ ನೀಡಿದೆ. ಪಕ್ಷಭೇದ ಮರೆತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications