ಲೋಕಸಭೆಯಲ್ಲಿ ಮೊಳಗಿತು ಕನ್ನಡ ಡಿಂಡಿಮ

ಎನ್ ಸಿಪಿ ಸಂಸದರು ಹಿಂದಿಯಲ್ಲಿ ಪ್ರಮಾಣ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದಿದ್ದರು. ಹಾಗೆಯೇತೃಣಮೂಲ್ ಕಾಂಗ್ರೆಸ್ ನ ಸಂಸದರು ಧೋತಿ ಕುತ್ರಾ ಧರಿಸಿ ರಾಜ್ಯ ಸಚಿವರಾಗಿ ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ನಮ್ಮ ರಾಜ್ಯದ ಸಂಸದರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನವನ್ನು ಮೆರೆದಿದ್ದಾರೆ. ಈ ಬಗ್ಗೆ ಡಿ ವಿ ಸದಾನಂದ ಗೌಡ ಮಾತನಾಡುತ್ತಾ , ನಮಗೆ ಕನ್ನಡದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲು ಹೆಮ್ಮೆ ಎನ್ನಿಸುತ್ತದೆ, ನಮ್ಮ ಭಾಷೆಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಯಾವ ಸಂಸದರಿಗೂ ಯಾವುದೇ ಕೀಳರಿಮೆ ಇಲ್ಲ ಎಂದು ಹೇಳಿದರು.
ಕರ್ನಾಟಕದ ಸಂಸದರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅನಂತ್ ಕುಮಾರ್, ಡಿ.ಬಿ.ಚಂದ್ರೇಗೌಡ, ಸುರೇಶ್ ಅಂಗಡಿ, ಪಿ.ಸಿ.ಮೋಹನ್, ಸಣ್ಣ ಫಕೀರಪ್ಪ, ಪಿ.ಸಿ.ಗದ್ದೀಗೌಡರ್, ರಮೇಶ್ ಜಿಗಜಿಣಗಿ, ಶಿವರಾಮಗೌಡ, ಜೆ.ಶಾಂತಾ, ಶಿವಕುಮಾರ್ ಉದಾಸಿ, ಪ್ರಹ್ಲಾದ್ ಜೋಷಿ, ಜಿ.ಎಂ.ಸಿದ್ದೇಶ್ವರ್, ಬಿ.ವೈ.ರಾಘವೇಂದ್ರ, ಡಿ.ವಿ.ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್, ಜನಾರ್ದನ ಸ್ವಾಮಿ, ಜಿ.ಎಸ್.ಬಸವರಾಜ್, ಹೆಚ್.ವಿಶ್ವನಾಥ್, ಆರ್.ಧ್ರುವನಾರಾಯಣ್ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ದೇವೇಗೌಡಾ, ಕುಮಾರಸ್ವಾಮಿ, ಅನಂತ್ ಕುಮಾರ್, ಖರ್ಗೆ, ನಳಿನ್ ಕುಮಾರ್ ಕಟೀಲ್, ಮಹಾಲಿಂಗೇಶ್ವರ ಅವರು ದೇವರ ಹೆಸರಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಆದರೆ ಜಿ ಎಂ ಸಿದ್ದೇಶ್ವರ್ ಮಾತ್ರ ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಂ.ವೀರಪ್ಪ ಮೊಯಿಲಿ ಮತ್ತು ಕೆ.ಎಚ್.ಮುನಿಯಪ್ಪ ಅವರು ಮಾತ್ರ ಇಂಗ್ಲಿಷ್ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ''ನಮ್ಮ ಎಲ್ಲ ಸಂಸದರು ಕನ್ನಡದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಕ್ಕೆ ನಮಗೇನು ಕೀಳರಿಮೆ ಇಲ್ಲ ಎಂದು'' ಹಾವೇರಿ ಸಂಸದ ಶಿವಕುಮಾರ್ ಉದಾಸಿ ತಿಳಿಸಿದರು.
ಜೆ ಎಚ್ ಪಟೇಲ್ ಮೊದಲಿಗರು
ಸಂಸತ್ ಭವನದಲ್ಲಿ ಕನ್ನಡ ಡಿಂಡಿಮ ಮೊಳಗುತ್ತಿರುವುದು ಇದೇ ಮೊದಲಲ್ಲ. ದಿವಂಗತ ಜೆ ಎಚ್ ಪಟೇಲ್ ಅವರು ಸಂಸತ್ ಗೆ 1967ರಲ್ಲಿ ಶಿವಮೊಗ್ಗದಿಂದ ಆಯ್ಕೆ ಯಾಗಿದ್ದಾಗ ಸಂಸತ್ ನಲ್ಲಿ ಕನ್ನಡದಲ್ಲೇ ಭಾಷಣ ಮಾತನಾಡಿದ್ದರು. ಕೆಲ ಸದಸ್ಯರು ಇದನ್ನು ವಿರೋಧಿಸಿದ್ದರು. ಆದರೆ ಅಂದಿನ ಸ್ಪೀಕರ್ ಎನ್ ಸಂಜೀವ ರೆಡ್ಡಿ ಕನ್ನಡದಲ್ಲೇ ಭಾಷಣ ಮಾಡುವಂತೆ ಪಟೇಲರನ್ನು ಹುರುದುಂಬಿಸಿದ್ದರು. ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ಮಾತನಾಡಿದ ಮೊದಲ ಸಂಸದ ಎಂಬ ಗೌರವಕ್ಕೆ ಜೆ ಎಚ್ ಪಟೇಲ್ ಪಾತ್ರರಾಗಿ ಹೊಸ ಇತಿಹಾಸ ಸೃಷ್ಟಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications