ರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಆನಂತರ ನಡೆದ ಆಪರೇಷನ್ ಕಮಲದಲ್ಲಿ ಬಳ್ಳಾರಿ ತ್ರಿಮೂರ್ತಿ ಗಣಿ ರೆಡ್ಡಿ ಸಹೋದರರು ತನು, ಮನ, ಧನ ಅರ್ಪಿಸಿ ಕೆಲಸಮಾಡಿದರು ಎನ್ನುವುದು ಸುಳ್ಳಲ್ಲ. ಜಂಟಿ ಸಮೀಕ್ಷೆಯ ಮೂಲಕ ಮುಖ್ಯಮಂತ್ರಿಗಳು ತಮ್ಮ ಬುಡಕ್ಕೇ ಸಂಚಕಾರ ತರಲು ಯತ್ನಿಸುತ್ತಿದ್ದಾರೆಂದು ಅರಿತ ಗಣಿಧಣಿಗಳು ನೇರ ಸಹಾಯಹಸ್ತ ಬೇಡಲು ಹೋಗಿದ್ದು ತಮ್ಮ ಗಣಿ ವ್ಯವಹಾರಕ್ಕೆ ಆಧಾರಸ್ತಂಭವಾಗಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿಯ ಬಳಿಗೆ. ಆಂಧ್ರ ಮುಖ್ಯಮಂತ್ರಿಯ ಮಗ, ಪ್ರಸಕ್ತ ಕಾಂಗ್ರೆಸ್ ಪಕ್ಷದ ಕಡಪ ಕ್ಷೇತ್ರದ ಸಂಸದ ಜಗಮೋಹನ್ ರೆಡ್ಡಿ ಬಳ್ಳಾರಿ ಗಣಿ ವ್ಯವಹಾರದಲ್ಲಿ ನೇರ ಪಾಲುದಾರರು.
ಒಂದು ವೇಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಗಣಿ ಒತ್ತುವರಿಯಾಗಿದೆ ಎಂದು ಸಾಬೀತಾದರೆ ರೆಡ್ಡಿ ಸಹೋದರರ ರಾಜಕೀಯ ಭವಿಷ್ಯಕ್ಕೆ ತೊಂದರೆ ಬರುವುದರಲ್ಲಿ ಸಂಶಯವಿಲ್ಲ. ಹೇಗಿದ್ದರೂ ಆಂಧ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆಂಧ್ರ ಸಿಎಂ ಅವರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ, ಯಡಿಯೂರಪ್ಪ ತಮ್ಮ ಬುಡಕ್ಕೆ ಎಳ್ಳುನೀರು ಬಿಡುತ್ತಿರುವುದು ಮತ್ತು ಪಕ್ಷದಲ್ಲಿ ಆದ್ಯತೆ ನೀಡದಿರುವುದನ್ನು ಆಂಧ್ರ ಮುಖ್ಯಮಂತ್ರಿ ಬಳಿ ಹೇಳಿ ಕೊಂಡಿದ್ದಾರೆ ಎನ್ನಲಾಗಿದೆ .(ರಾಜಶೇಖರ್ ರೆಡ್ಡಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜನಾರ್ಧನ ರೆಡ್ಡಿ ಪಾಲ್ಗೊಂಡಿದ್ದರು).
ಪಕ್ಷಾಂತರ ನಿಷೇಧ ಕಾಯಿದೆ ಅನ್ವಯವಾಗದ ರೀತಿಯಲ್ಲಿ ಶಾಸಕರನ್ನು ಬುಟ್ಟಿಗೆ ಹಾಕಿಕೊಂಡು ಬರುವಂತೆ ಆಹ್ವಾನ ನೀಡಿದರು ಎನ್ನಲಾಗಿದೆ. ಬಳ್ಳಾರಿ ಗಣಿಧಣಿಗಳ ಬಳಿ ಸುಮಾರು 35 ಶಾಸಕರು ಇದ್ದಾರೆ, ಹಾಗೆ ರೇಣುಕಾಚಾರ್ಯ, ಜಾರಕೀಹೊಳೆ ಸೇರಿದಂತೆ ಇನ್ನೂ 10 ಶಾಸಕರು ರೆಡ್ಡಿ ಸಹೋದರರಿಗೆ ಕೈಜೋಡಿಸುವ ಸಾಧ್ಯತೆ ಇದೆ. ಇದನ್ನೇ ಆಧಾರವಾಗಿಟ್ಟು ಕೊಂಡು ತ್ರಿಮೂರ್ತಿ ರೆಡ್ಡಿ ಸಹೋದರರು "ಯಡಿಯೂರಪ್ಪ ಹಠಾವೋ, ಬಿಜೆಪಿ ಬಚಾವೋ" ಕಾರ್ಯಾಚರಣೆಗೆ ಮುಂದಾಗಿದ್ದು ಎನ್ನುತ್ತವೆ ನಂಬಲರ್ಹ ಮೂಲಗಳು.
ಒಟ್ಟಿನಲ್ಲಿ ಎಲ್ಲವೂ ತ್ರಿಮೂರ್ತಿ ರೆಡ್ಡಿ ಸಹೋದರರ ನಿರೀಕ್ಷೆಯಂತೆ ನಡೆದರೆ, ಕಾಂಗ್ರೆಸ್ ಹೈಕಮಾಂಡ್ ಈ ಕಾರ್ಯಾಚರಣೆಗೆ ಅನುಮತಿ ನೀಡಿದರೆ 2006 ರಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದರೂ ನಡೆಯಬಹುದು ಅನ್ನುತ್ತದೆ ಬಿಜೆಪಿ ಮೂಲಗಳು ಅಥವಾ ಬಳ್ಳಾರಿ ಗಣಿ ವಿವಾದ ಸರಿಪಡಿಸಿದರೆ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟು ಅದು ಈಡೇರಿದರೆ ಗಣಿಧಣಿಗಳು ಸುಮ್ಮನಾಗಬಹುದು.
(ದಟ್ಸ್ ಕನ್ನಡ ವಾರ್ತೆ)
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications