ರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಆನಂತರ ನಡೆದ ಆಪರೇಷನ್ ಕಮಲದಲ್ಲಿ ಬಳ್ಳಾರಿ ತ್ರಿಮೂರ್ತಿ ಗಣಿ ರೆಡ್ಡಿ ಸಹೋದರರು ತನು, ಮನ, ಧನ ಅರ್ಪಿಸಿ ಕೆಲಸಮಾಡಿದರು ಎನ್ನುವುದು ಸುಳ್ಳಲ್ಲ. ಜಂಟಿ ಸಮೀಕ್ಷೆಯ ಮೂಲಕ ಮುಖ್ಯಮಂತ್ರಿಗಳು ತಮ್ಮ ಬುಡಕ್ಕೇ ಸಂಚಕಾರ ತರಲು ಯತ್ನಿಸುತ್ತಿದ್ದಾರೆಂದು ಅರಿತ ಗಣಿಧಣಿಗಳು ನೇರ ಸಹಾಯಹಸ್ತ ಬೇಡಲು ಹೋಗಿದ್ದು ತಮ್ಮ ಗಣಿ ವ್ಯವಹಾರಕ್ಕೆ ಆಧಾರಸ್ತಂಭವಾಗಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿಯ ಬಳಿಗೆ. ಆಂಧ್ರ ಮುಖ್ಯಮಂತ್ರಿಯ ಮಗ, ಪ್ರಸಕ್ತ ಕಾಂಗ್ರೆಸ್ ಪಕ್ಷದ ಕಡಪ ಕ್ಷೇತ್ರದ ಸಂಸದ ಜಗಮೋಹನ್ ರೆಡ್ಡಿ ಬಳ್ಳಾರಿ ಗಣಿ ವ್ಯವಹಾರದಲ್ಲಿ ನೇರ ಪಾಲುದಾರರು.
ಒಂದು ವೇಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಗಣಿ ಒತ್ತುವರಿಯಾಗಿದೆ ಎಂದು ಸಾಬೀತಾದರೆ ರೆಡ್ಡಿ ಸಹೋದರರ ರಾಜಕೀಯ ಭವಿಷ್ಯಕ್ಕೆ ತೊಂದರೆ ಬರುವುದರಲ್ಲಿ ಸಂಶಯವಿಲ್ಲ. ಹೇಗಿದ್ದರೂ ಆಂಧ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆಂಧ್ರ ಸಿಎಂ ಅವರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ, ಯಡಿಯೂರಪ್ಪ ತಮ್ಮ ಬುಡಕ್ಕೆ ಎಳ್ಳುನೀರು ಬಿಡುತ್ತಿರುವುದು ಮತ್ತು ಪಕ್ಷದಲ್ಲಿ ಆದ್ಯತೆ ನೀಡದಿರುವುದನ್ನು ಆಂಧ್ರ ಮುಖ್ಯಮಂತ್ರಿ ಬಳಿ ಹೇಳಿ ಕೊಂಡಿದ್ದಾರೆ ಎನ್ನಲಾಗಿದೆ .(ರಾಜಶೇಖರ್ ರೆಡ್ಡಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜನಾರ್ಧನ ರೆಡ್ಡಿ ಪಾಲ್ಗೊಂಡಿದ್ದರು).
ಪಕ್ಷಾಂತರ ನಿಷೇಧ ಕಾಯಿದೆ ಅನ್ವಯವಾಗದ ರೀತಿಯಲ್ಲಿ ಶಾಸಕರನ್ನು ಬುಟ್ಟಿಗೆ ಹಾಕಿಕೊಂಡು ಬರುವಂತೆ ಆಹ್ವಾನ ನೀಡಿದರು ಎನ್ನಲಾಗಿದೆ. ಬಳ್ಳಾರಿ ಗಣಿಧಣಿಗಳ ಬಳಿ ಸುಮಾರು 35 ಶಾಸಕರು ಇದ್ದಾರೆ, ಹಾಗೆ ರೇಣುಕಾಚಾರ್ಯ, ಜಾರಕೀಹೊಳೆ ಸೇರಿದಂತೆ ಇನ್ನೂ 10 ಶಾಸಕರು ರೆಡ್ಡಿ ಸಹೋದರರಿಗೆ ಕೈಜೋಡಿಸುವ ಸಾಧ್ಯತೆ ಇದೆ. ಇದನ್ನೇ ಆಧಾರವಾಗಿಟ್ಟು ಕೊಂಡು ತ್ರಿಮೂರ್ತಿ ರೆಡ್ಡಿ ಸಹೋದರರು "ಯಡಿಯೂರಪ್ಪ ಹಠಾವೋ, ಬಿಜೆಪಿ ಬಚಾವೋ" ಕಾರ್ಯಾಚರಣೆಗೆ ಮುಂದಾಗಿದ್ದು ಎನ್ನುತ್ತವೆ ನಂಬಲರ್ಹ ಮೂಲಗಳು.
ಒಟ್ಟಿನಲ್ಲಿ ಎಲ್ಲವೂ ತ್ರಿಮೂರ್ತಿ ರೆಡ್ಡಿ ಸಹೋದರರ ನಿರೀಕ್ಷೆಯಂತೆ ನಡೆದರೆ, ಕಾಂಗ್ರೆಸ್ ಹೈಕಮಾಂಡ್ ಈ ಕಾರ್ಯಾಚರಣೆಗೆ ಅನುಮತಿ ನೀಡಿದರೆ 2006 ರಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದರೂ ನಡೆಯಬಹುದು ಅನ್ನುತ್ತದೆ ಬಿಜೆಪಿ ಮೂಲಗಳು ಅಥವಾ ಬಳ್ಳಾರಿ ಗಣಿ ವಿವಾದ ಸರಿಪಡಿಸಿದರೆ ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟು ಅದು ಈಡೇರಿದರೆ ಗಣಿಧಣಿಗಳು ಸುಮ್ಮನಾಗಬಹುದು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications