ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಲಪ್ಪ ವಿರುದ್ಧ ತಿರುಗಿ ಬಿದ್ದ ಗೋಪಾಲ ಕೃಷ್ಣ

By Staff
|
Google Oneindia Kannada News

ಬೆಂಗಳೂರು, ಜೂ.2: ರಾಜ್ಯ ಬಿಜೆಪಿ ಸರಕಾರದಲ್ಲಿ ಭುಗಿಲೆದ್ದಿರುವ ಅಸಮಾಧಾನ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಸಚಿವ ಎಚ್.ಹಾಲಪ್ಪ ಅವರ ವಿರುದ್ಧ ಆಡಳಿತ ಪಕ್ಷದ ಶಾಸಕ ಬೇಳೂರು ಗೋಪಾಲಕೃಷ್ಣ ತಿರುಗಿ ಬಿದ್ದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರ ಧೋರಣೆ ವಿರುದ್ಧ ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬಳ್ಳಾರಿ ರೆಡ್ಡಿ ಸಹೋದರರು ತಿರುಗಿಬಿದ್ದಿರುವುದು ಒಂದೆಡೆ ಯಾದರೆ, ತವರು ಜಿಲ್ಲೆ ಶಿವಮೊಗ್ಗ ದಲ್ಲಿ ಸಚಿವ ಎಚ್.ಹಾಲಪ್ಪ ಅವರ ವಿರುದ್ಧ ಬಿಜೆಪಿ ಪಕ್ಷದ ಶಾಸಕರೇ ತಿರುಗಿ ಬಿದ್ದಿರುವುದು ಆಡಳಿತ ಪಕ್ಷ ದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತಷ್ಟು ದೃಢಪಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಮುನ್ನಡೆ ದೊರಕಿಸಿಕೊಡದ ಸಚಿವರ ವಿರುದ್ಧ ಕ್ರಮ ಕೈಗೊಳ್ಳು ವುದಾಗಿ ಮುಖ್ಯಮಂತ್ರಿಯವರು ಹೇಳಿಕೆ ನೀಡಿದ್ದರು. ಸೊರಬ ಕ್ಷೇತ್ರ ದಲ್ಲಿ ಪಕ್ಷದ ಅಭ್ಯರ್ಥಿಗೆ ಭಾರೀ ಹಿನ್ನಡೆ ಉಂಟಾಗಿದೆ. ಇದರ ಹೊಣೆ ಹೊತ್ತು ಹಾಲಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X