ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ

ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ ಬಂದಿದೆಯೇ ವಿನಃ ಹಣ, ಹೆಂಡ ಹಂಚಿಕೆಯ ಮೂಲಕ ಅಲ್ಲ ಎಂದು ಸದಾನಂದಗೌಡ ತಿಳಿಸಿದರು. ಈಶ್ವರಪ್ಪ ಆರೋಪದ ಬಗ್ಗೆ ರಾಷ್ಟ್ರಾಧ್ಯಕ್ಷರಿಗೆ ತಿಳಿಸಿದ್ದೇವೆ. ರಾಜ್ಯ ಘಟಕದಿಂದಲೂ ಈಶ್ವರಪ್ಪ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.
ಪಕ್ಷದ ಹಿರಿಯ ಸಚಿವರಾಗಿ ಈಶ್ವರಪ್ಪ ಹೀಗೆ ಮಾತನಾಡುವುದು ಸರಿಯಲ್ಲ. ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತದೆ. ನಮ್ಮಲ್ಲಿನ ಅಸಮಾಧಾನವನ್ನು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಬಗೆಹರಿಸಿಕೊಳ್ಳಬೇಕೆ ಹೊರತು ಹೀಗೆ ಬೀದಿರಂಪ ಮಾಡಬಾರದು ಎಂದು ಸದಾನಂದಗೌಡ ಸಲಹೆ ನೀಡಿದರು.
ಸಂಜೆ ಈಶ್ವರಪ್ಪ ಪತ್ರಿಕಾಗೋಷ್ಠಿ
ಸಚಿವರ, ಶಾಸಕರ ತೀವ್ರ ಆಕ್ರೋಶಕ್ಕೆ ಗುರಿಯಾಗಿರುವ ಈಶ್ವರಪ್ಪ ಇಂದು ಸಂಜೆ ಸುದ್ದಿಗೋಷ್ಠಿ ಕರೆಯುವುದಾಗಿ ನವದೆಹಲಿಯಲ್ಲಿ ತಿಳಿಸಿದರು. ಸಂಜೆ ನಾಲ್ಕು ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಎಲ್ಲರ ಪ್ರಶ್ನೆಗಳಿಗೆ ಉತ್ತ್ತರ ನೀಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು. ಈ ವಿಚಾರದಲ್ಲಿ ಬಿಜೆಪಿಗೂ, ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ವ್ಯತ್ಯಾಸ ಇರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರು ತನಿಖೆ ನಡೆಸಲಿ ಎಂದು ಈಶ್ವರಪ್ಪ ಒತ್ತಾಯಿಸಿದ್ದರು. ಹಾಗೆಯೇ ಶಿಕಾರಿಪುರಕ್ಕಿಂತಲೂ ಶಿವಮೊಗ್ಗದಲ್ಲಿ ಬಿಜೆಪಿಗೆ ಹೆಚ್ಚು ಮತಳ ಅಂತರವಿತ್ತು ಎಂದು ಯಡಿಯೂರಪ್ಪ ಮೇಲೂ ಈಶ್ವರಪ್ಪ ಆರೋಪ ಹೊರಿಸಿದ್ದ್ದರು.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications