ಯಡಿಯೂರಪ್ಪ ರಾಜೀನಾಮೆಗೆ ಡಿಕೆಶಿ ಆಗ್ರಹ
ಬೆಂಗಳೂರು, ಜೂ.3: ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಸ್ವತಃ ಸಚಿವ ಈಶ್ವರಪ್ಪ ಬಹಿರಂಗವಾಗಿ ತನಿಖೆಗೆ ಆಗ್ರಹಿಸಿರುವ ಹಿನ್ನಲೆಯಲ್ಲಿ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಣ, ಹೆಂಡ ಹಂಚಿ ಗೆಲುವು ಸಾಧಿಸಲಾಗಿದೆ ಎಂದು ಅವರದೇ ಸರಕಾರದ ಸಚಿವರು ಹೇಳುವ ಮೂಲಕ ರಾಜ್ಯ ಬಿಜೆಪಿ ಸರಕಾರ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ. ಈಶ್ವರಪ್ಪ ಹೇಳಿದಂತೆ ಯಾವುದೇ ತನಿಖೆಯ ಅಗತ್ಯವಿಲ್ಲ. ಈ ಎಲ್ಲಾ ಘಟನೆಗಳಿಗೆ ನೇರ ಹೊಣೆ ಮುಖ್ಯಮಂತ್ರಿಗಳು. ನಾವು ಚುನಾವಣೆಯಲ್ಲಿ ಅಧಿಕಾರಿಗಳ ದುರ್ಬಳಕೆ, ಅಕ್ರಮ ಹಣ ಹಂಚಿಕೆ, ಹೆಂಡದ ಹೊಳೆ ನಡೆದು ಆಡಳಿತ ಯಂತ್ರದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಜನತೆಗೆ ವಿವರಿಸುತ್ತಾ ಬಂದಿದ್ದೇವೆ.
ಮತಗಳಿಕೆಗಾಗಿ ಬಿಜೆಪಿ ಯಾವ ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದೆ. ತಮ್ಮ ಮಗನನ್ನು ಶಿವಮೊಗ್ಗದಲ್ಲಿ ಇನ್ನಿಲ್ಲದ ಸಾಹಸ ಮಾಡಿ, ಹಣ ಹೆಂಡದ ಹೊಳೆ ಹರಿಸಿ ದೆಹಲಿಗೆ ಕಳುಹಿಸಿ ಕೊಟ್ಟಿದ್ದಾರೆ ಎನ್ನುವುದು ಜನಸಾಮಾನ್ಯರಿಗೆ ತಿಳಿಯದ ವಿಷಯವೇನೂ ಅಲ್ಲ. ಯಡಿಯೂರಪ್ಪ ಅವರಿಗೆ ಅವರ ಸ್ಥಾನದಲ್ಲಿ ಮುಂದುವರಿಯುವ ಯೋಗ್ಯತೆ ಇಲ್ಲ, ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications