ಕಸಬ್ ಪರ ವಕೀಲರಿಗೆ ದಿನಕ್ಕೆ ರು.2,500 ಭತ್ಯೆ!
ಮುಂಬೈ, ಜೂ 3: ಉಗ್ರ ಅಜ್ಮಲ್ ಕಸಬ್ ಪರ ವಾದಿಸಲು ಮಹಾರಾಷ್ಟ್ರ ಸರಕಾರ ಈತನ ಪರ ವಕೀಲ ಅಬ್ಬಾಸ್ ಕಜ್ಮಿ ಗೆ ನೀಡುವ ಭತ್ಯೆ ಎಷ್ಟು ಗೊತ್ತೇ? ದಿನ ಒಂದಕ್ಕೆ ರುಪಾಯಿ 2500. ವಾರದಲ್ಲಿ ಐದು ಸಲ ವಿಚಾರಣೆ ನಡೆಯುತ್ತದೆ ಅಂದರೆ ವಾರಕ್ಕೆ ರು.12,500, ತಿಂಗಳಿಗೆ 50,000 ರುಪಾಯಿ!
ಮಾಡಿದ್ದು ಪೈಶಾಚಿಕ ಕೆಲಸ. ಅವನ ಪರ ವಾದಿಸಲು ವಕೀಲರು ಬೇರೆ. ಆ ವಕೀಲರಿಗೆ ಸರಕಾರದಿಂದ ತಿಂಗಳಿಗೆ ಭತ್ಯೆ. ದೇಶದ ವಾಣಿಜ್ಯ ನಗರಿ ಮುಂಬೈ ನಗರವನ್ನು ತಮ್ಮ ಮುಷ್ಠಿಯಲ್ಲಿ ಇಟ್ಟುಕೊಂಡು ನೂರಾರು ಜೀವಗಳನ್ನು ಬಲಿತೆಗೆದುಕೊಂಡು ಇಡೀ ದೇಶವೇ ತಲೆ ತಗ್ಗಿಸುವಂತೆ ಭಯೋತ್ಪಾದನಾ ಕೆಲಸ ಮಾಡಿದ್ದಕ್ಕೆ ಕೊಡುತ್ತಿರುವ ಬಳುವಳಿ.
ಭಾರತದ ಸಂವಿಧಾನದ ಕಾನೂನಿನಡಿ ಆರೋಪಿ ಪರ ವಾದಿಸಲು ಯಾರೂ ಮುಂದೆ ಬರದಿದ್ದರೆ, ರಾಜ್ಯ ಸರಕಾರದ ಕಾನೂನು ಇಲಾಖೆಯ ವಕೀಲರನ್ನು ಕೇಸ್ ಪರ ವಾದಿಸಲು ಕೋರ್ಟ್ ನೇಮಕ ಮಾಡಬಹುದು. ನಿಯಮದ ಅನ್ವಯ ಕೇಸ್ ಸಂಪೂರ್ಣ ಮುಗಿದ ನಂತರ ರು.900 ಭತ್ಯೆ ನೀಡಬೇಕು.
ಆದರೆ ಈ ಕೇಸ್ ನ ಸೂಕ್ಷ್ಮತೆಯಿಂದಾಗಿ ಕೋರ್ಟ್ ವಕೀಲರಿಗೆ ನೀಡುವ ಭತ್ಯೆಯನ್ನು ಸ್ವಲ್ಪ ಮಟ್ಟಿಗೆ ಹೆಚ್ಚಿಸುವಂತೆ ಸರಕಾರವನ್ನು ಕೇಳಿಕೊಂಡಿತ್ತು. ಇದಕ್ಕೆ ಸ್ಪಂದಿಸಿದ ಮಹಾರಾಷ್ಟ್ರ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ ಮತ್ತು ಸರಕಾರದ ಆದೇಶದ ಪ್ರತಿ ತನಗೆ ತಲುಪಿದೆ ಎಂದು ವಕೀಲ ಅಬ್ಬಾಸ್ ಕಜ್ಮಿ ಹೇಳಿದ್ದಾರೆ.
(ಏಜೆನ್ಸೀಸ್)
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications