ದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ

ಶಿವಮೊಗ್ಗ ಪತ್ರಿಕಾಗೋಷ್ಠಿಯಲ್ಲಿ ತಾವು ಮಾತನಾಡುತ್ತಾ, ನೀತಿ, ಸಿದ್ದಾಂತಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಅದು ಬಿಟ್ಟು ಹಣ,ಹೆಂಡದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಹೇಳಿದ್ದೆ. ಅದನ್ನೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ತಪ್ಪಾಗಿ ಅರ್ಥೈಸಿ ಪ್ರಚಾರ ಮಾಡಿವೆ. ನನ್ನ ಹೇಳಿಕೆ ಬಗ್ಗೆ ತಪ್ಪು ಅರ್ಥ ನೀಡಲಾಗಿದೆ. ಕೆಲವೊಂದು ಪತ್ರಿಕೆಗಳು ನನ್ನ ಹೇಳಿಕೆಯನ್ನು ಹೀಗೆ ತಿರುಚಿ ಬರೆದಿವೆ ಎಂದು ಈಶ್ವರಪ್ಪ ಹೇಳಿದರು.
ಆದರೆ ಧಾರ್ಮಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡುತ್ತಾ, ಶಿಕಾರಿಪುರಕ್ಕಿಂತಲೂ ಶಿವಮೊಗ್ಗದಲ್ಲಿ ಬಿಜೆಪಿ ಬಹಳಷ್ಟು ಅಂತರದಿಂದ ಗೆದ್ದಿದೆ ಎಂದಿದ್ದರು. ಆ ಹೇಳಿಕೆಯನ್ನು ತಾನು ಖಂಡಿಸಿದ್ದೆ. ಧಾರ್ಮಿಕ ಸಮ್ಮೇಳನದಲ್ಲಿ ಯಡಿಯೂರಪ್ಪ ಅದನ್ನು ಹೇಳುವ ಅವಶ್ಯಕತೆಯಾದರೂ ಏನಿತ್ತು. ಧಾರ್ಮಿಕ ಸಮಾರಂಭದಲ್ಲಿ ಅವರು ಹಾಗೆಮಾತನಾಡಬಾರದಿತ್ತು. ಈ ಮಾತಿಗೆ ತಾವು ಈಗಲೂ ಬದ್ಧ ಎಂದು ಈಶ್ವರಪ್ಪ ತಿಳಿಸಿದರು.
ಇಂದು ನನಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಅವರಿಂದ ಕರೆ ಬಂತು. ಅವರ ಬಳಿ ಈ ಬಗ್ಗೆ ಎಲ್ಲವನ್ನೂ ತಿಳಿಸಿದ್ದೇನೆ. ಈಶ್ವರಪ್ಪ ವಿರುದ್ಧ ಯಾವುದೇ ನೋಟೀಸ್ ಜಾರಿ ಮಾಡದಿರುವಂತೆ ಸದಾನಂದಗೌಡರಿಗೆ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಒಂದು ಮನೆ ಎಂದ ಮೇಲೆ ಅಣ್ಣ ತಮ್ಮಂದಿರ ನಡುವೆ ಜಗಳ ಬರುವುದಿಲ್ಲವೇ? ಪಕ್ಷ ಎಂದ ಮೇಲೆ ಸಣ್ಣ ಪುಟ್ಟ ಭಿನಾಭಿಪ್ರಾಯಗಳು ಸಹಜ. ರಾಜ್ಯದಲ್ಲಿ ಬಿಜೆಪಿ ಸರಕಾರ ಸಬಲವಾಗಿದೆ. ಐದು ವರ್ಷಗಳನ್ನು ಕಂಡಿತ ಪೂರೈಸುತ್ತದೆ ಎಂದರು.
ಇದಕ್ಕೂ ಮುನ್ನ ಈಶ್ವರಪ್ಪ ನವದೆಹಲಿಯಲ್ಲಿ ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹಸ್ತ ಲಾಘವ ಮಾಡಿದ್ದರು. ಆದರೆ ಯಾವುದೇ ಮಾತುಕತೆ ಆಡಲಿಲ್ಲ. ಪತ್ರಿಕಾಗೋಷ್ಠಿ ಕರೆಯುವ ಬಗ್ಗೆ ಮಾತ್ರ ಈಶ್ವರಪ್ಪ ಸ್ಪಷ್ಟ ಸೂಚನೆ ಕೊಟ್ಟಿದ್ದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಕಲ್ಲುಬಂಡೆಯಷ್ಟು ಗಟ್ಟಿಯಾಗಿದೆ. ನಮ್ಮಲ್ಲಿನ ಸಮಸ್ಯೆಗಳನ್ನು ಕುಳಿತು, ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದರು. ಒಟ್ಟಿನಲ್ಲಿ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಬೂದಿಮುಚ್ಚಿದ ಕೆಂಡದಂತಿದೆ, ಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾಗಿದೆ ಅಷ್ಟೆ.
(ದಟ್ಸ್ ಕನ್ನಡ ವಾರ್ತೆ)
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications