ಬೇಡಿಕೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿಗಳ ಧರಣಿ

Strike by bank employees in Shivamogga
ಶಿವಮೊಗ್ಗ, ಜೂ. 4 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಕರೆದಿದ್ದ ಅಖಿಲ ಭಾರತ ಬ್ಯಾಂಕುಗಳ ಪ್ರತಿಭಟನೆಯನ್ನು ಬೆಂಬಲಿಸಿ ವಿವಿಧ ಬ್ಯಾಂಕುಗಳ ಸಿಬ್ಬಂದಿಗಳು ಶಿವಮೊಗ್ಗದ ತಿಲಕ್ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಆವರಣದಲ್ಲಿ ಇಂದು ಧರಣಿ ನಡೆಸಿದರು.

ವೇತನ ಪರಿಷ್ಕರಣೆ, ಪಿಂಚಣಿ ಮತ್ತು ವಿವಿಧ ಬ್ಯಾಂಕುಗಳಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಬೇಡಿಕೆಯೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.

ಈ ಬೇಡಿಕೆಗಳ ಪೂರೈಸುವ ಒತ್ತಾಯಕ್ಕಾಗಿ ಜೂನ್ 11ರಂದು ಸಂಜೆ 5.30ಕ್ಕೆ ಶಿವಪ್ಪನಾಯಕ ಪ್ರತಿಮೆ ಮುಂಭಾಗದಲ್ಲಿ ಸಾಮೂಹಿಕ ಮೆರವಣಿಗೆ ಮತ್ತು ಪ್ರಾತ್ಯಕ್ಷಿಕೆಯನ್ನು ನಡೆಸಲಾಗುವುದು. ಜೂನ್ 12ರಂದು ಬೆಳಿಗ್ಗೆ 10.30ಕ್ಕೆ ಸರ್.ಎಂ.ವಿ. ರಸ್ತೆಯಲ್ಲಿರುವ ಎಸ್.ಬಿ.ಐ. ಮುಖ್ಯ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಯುನೈಟೆಡ್ ಫೋರಂ ಆಫ್ ಯೂನಿಯನ್ ತಿಳಿಸಿದೆ.

ಧರಣಿ ಸತ್ಯಾಗ್ರಹದಲ್ಲಿ ಯೂನಿಯನ್‌ನ ಸಂಚಾಲಕ ವಿನೋದ್‌ಪೈ, ಎಐಬಿಇಎ ಹಿರಣ್ಣಯ್ಯ, ಎಐಬಿಒಸಿ ಲೋಕೇಶ್ವರನ್, ಎನ್‌ಸಿಬಿಇ ಪ್ರಾಣೇಶ್, ಎಐಬಿಒಎನ ಗೋಕುಲ್ ರಾಜ್ ಎಒಬಿಡಬ್ಲ್ಯೂ ಭಾಸ್ಕರ್ ಶೆಟ್ಟಿ, ಎನ್‌ಒಬಿಒ ಹೆಚ್.ಈರಣ್ಣ ಮತ್ತಿತರರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+