ಆರ್ ಟಿಒ ಕಚೇರಿಗಳ ಗಣಕೀಕರಣ : ಆರ್ ಅಶೋಕ್

ರಾಜ್ಯದ ಎಲ್ಲಾ ಆರ್ ಟಿಒ ಕಚೇರಿಗಳಲ್ಲೂ ಇನ್ನು ಹತ್ತು ದಿನದೊಳಗೆ ವಾಹನಗಳಿಗೆ ಆರ್ ಸಿ. ಬುಕ್ ಬದಲು ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಇದರಲ್ಲಿ ಎಲ್ಲಾ ಮಾಹಿತಿಯು ಭ್ಯವಿರುವುದು. ಇನ್ನುಮುಂದೆ ವೆಬ್ಸೈಟ್ ಮುಖಾಂತರವೇ ವಾಹನ ಚಾಲನಾ ಪರವಾನಗಿ ಮಾಹಿತಿಯನ್ನು ಪಡೆದುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಸಾರಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಡಿ ನಗರದ ಏಳು ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ದೃಷ್ಠಿಯಿಂದ , ಅಂದಾಜು 108.59 ಕೋಟಿ ರು.ಗಳ ಕಾಮಗಾರಿ ಕೆಲಸವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರವು ಶೇ. 80 ಭಾಗ, ರಾಜ್ಯ ಸರ್ಕಾರವು ಶೇ.10 ಭಾಗವನ್ನು ನೀಡುವುದು. ಉಳಿದ ಶೇ. 10ರಷ್ಟು ಭಾಗವನ್ನು ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಭರಿಸಲಾಗುವುದೆಂದು ತಿಳಿಸಿದ ಅವರು ಎಲ್ಲಾ ಏಳು ಬಸ್ ನಿಲ್ದಾಣಗಳ ಕಾಮಗಾರಿ ಕೆಲಸವನ್ನು ಜುಲೈ 2010ರೊಳಗೆ ಪೂರ್ಣಗೊಳಿಸಲಾಗುವುದೆಂದು ಹೇಳಿದರು.
ಪ್ರಯಾಣಿಕರ ಸೌಲಭ್ಯಕ್ಕಾಗಿ 20 ವೋಲ್ವೋ, 41 ಸೆಮಿ ಲೋಫ್ಲೋರ್, 50 ಮೀಡಿಯಂ ಲೋಫ್ಲೋರ್ ವಾಹನಗಳನ್ನು ನರ್ಮ್ ಯೋಜನೆಯಡಿಯಲ್ಲಿ 111 ನೂತನ ಮಾದರಿಯ ನಗರ ಸಾರಿಗೆ ವಾಹನಗಳನ್ನು ನಗರದ ಎಲ್ಲಾ ಬಡಾವಣೆಗಳಿಗೆ ಹಾಗೂ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಹಂತಹಂತವಾಗಿ ಬಿಡಲಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ತನ್ವೀರ್ ಸೇಠ್ ಅವರು ಬೆಂಗಳೂರು ನಗರದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಿರುವಂತೆ ಮೈಸೂರು ನಗರ ಹಾಗೂ ಗ್ರಾಮಾಂತರ ವಿದ್ಯಾರ್ಥಿಗಳಿಗೂ ನೀಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಸಮಾರಂಭದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುರುಷೋತ್ತಮ್, ಮೈಸೂರು ಜಿಲ್ಲಾ ಪಂಚಾಯ್ತಿ ಹಂಗಾಮಿ ಅಧ್ಯಕ್ಷರಾದ ಸಿದ್ದಪ್ಪ , ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಜಿ ಟಿ ದೇವೇಗೌಡ, ಶಾಸಕ ಸಾ ರಾ ಮಹೇಶ್, ವಿಧಾನ ಪರಿಷತ್ ಸದಸ್ಯರಾದ ಕೆ ಟಿ ಶ್ರೀಕಂಠೇಗೌಡ, ತೋಂಟದಾರ್ಯ ಮುಂತಾದವರು ಉಪಸ್ಥಿತರಿದ್ದರು.
(ದಟ್ಸ್ ಕನ್ನಡವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications