5 ದಿನವಾಯಿತು ಅಭಿಷೇಕ್ ಮೃತದೇಹ ಪತ್ತೆಯಾಗಿಲ್ಲ
ಬೆಂಗಳೂರು, ಜೂ. 4 : ಕಳೆದ ಭಾನುವಾರ ಮಳೆಯಿಂದಾಗಿ ಲಿಂಗರಾಜಪುರದ ಮೋರಿಯೊಂದರಲ್ಲಿ ತೇಲಿ ಹೋದ ಬಾಲಕ ಅಭಿಷೇಕ್ ಮೃತ ದೇಹ ಐದು ದಿನವಾದರೂ ಪತ್ತೆಯಾಗಿಲ್ಲ. ಪತ್ತೆ ಕಾರ್ಯ ಮುಂದುವರಿಸಿರುವ ಅಗ್ನಿಶಾಮಕ ಮತ್ತು ಬಿಬಿಎಂಪಿ ಅಧಿಕಾರಗಳ ಕಾರ್ಯಾಚರಣೆ ಗುರುವಾರವೂ ವಿಫಲವಾಗಿದೆ. ಮಗುವನ್ನು ಕಳೆದುಕೊಂಡ ತಾಯಿಯ ಅರಣ್ಯರೋದನ ಮುಂದುವರೆದಿದ್ದು, ಮತ ಕೇಳಲು ಬರುವ ರಾಜಕೀಯ ನಾಯಕರು ಮಗು ಕಳೆದುಕೊಂಡ ತಾಯಿ ಸಾಂತ್ವನಕ್ಕೆ ಆಗಮಿಸದಿರುವುದು ವಿಷಾದಕರ ಸಂಗತಿಯೇ ಸರಿ.
ಆದರೆ, ಲೋಕಾಯುಕ್ತ ನ್ಯಾಯಮೂರ್ತಿ ಎಂ ಸಂತೋಷ ಹೆಗ್ಡೆ ಮತ್ತು ಉಪಲೋಕಾಯುಕ್ತ ಪತ್ರಿ ಬಸವನಗೌಡ ಮಾತ್ರ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರಷ್ಟೇ. ಕರಳು ಬಳ್ಳಿಯನ್ನು ಕಳೆದುಕೊಂಡ ತಾಯಿ ಸಂಬಂಧಪಟ್ಟವರಿಗೆ ಹಿಡಿ ಶಾಪ ಹಾಕುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಮುಖ್ಯಮಂತ್ರಿ ಯಡಿಯೂರಪ್ಪ, ಬೆಂಗಳೂರು ಉಸ್ತುವಾರಿ ಸಚಿವ ಆರ್ ಅಶೋಕ್ ಅವರು ಘಟನೆಗೆ ಸಂಬಂಧಿಸಿದಂತೆ ತುಟಿಪಿಟ್ಟೆನ್ನದಿರುವುದು ಆಶ್ಚರ್ಯ ಮತ್ತು ಕೋಪಕ್ಕೆ ಕಾರಣವಾಗಿದೆ. ಪಕ್ಷದಲ್ಲಿ ಎದ್ದಿರುವ ಬಂಡಾಯ ಮತ್ತು ಭಿನ್ನಾಭಿಪ್ರಾಯ ಯಡಿಯೂರಪ್ಪ ಅವರನ್ನು ಕಿವುಡರನ್ನಾಗಿಸಿರುವುದು ಸುಳ್ಳಲ್ಲ.
ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಮಳೆಯಿಂದಾಗಿ ಲಿಂಗಾರಾಜಪುರದ ಬಳಿ ತಾಯಿಯ ಜೊತೆಗೆ ಹೊರಬಂದಿದ್ದ ಅಭಿಷೇಕ್ ಮೋರಿಯಲ್ಲಿ ಕೊಚ್ಚಿ ಹೋಗಿದ್ದ. ಮೋರಿಯಲ್ಲಿ ಹೂಳೆತ್ತುವ ಕಾರ್ಯ ನಡೆದಿದೆ. ಇಂದು ಚಂದ್ರಿಕಾ ಸಾಬೂನು ಕಾರ್ಖಾನೆ ಬಳಿಯ ಪೆಟ್ರೋಲ್ ಬಂಕ್ ವರೆಗೂ ಕಾರ್ಯಾಚರಣೆ ನಡೆಸಲಾಗಿತಾದರೂ ಅಭಿಷೇಕ್ ನ ಮೃತದೇಹ ಮಾತ್ರ ಪತ್ತೆಯಾಗಿಲ್ಲ. ಮೊದಲ ಹಂತದಲ್ಲಿ ಅಭಿಷೇಕ್ ಬಿದ್ದ ಮೋರಿಯಿಂದ ನಾಗಾವರ ಕೆರೆವರೆಗೂ ಶೋಧಕಾರ್ಯ ಮಾಡಲಾಗಿತ್ತು. ತೇಲಿ ಹೋದಾಗಿನಿಂದ ಬಿಬಿಎಂಪಿ, ಅಗ್ನಿಶಾಮಕ ದಳಗಳು ಕಾರ್ಯಾಚರಣೆ ಆರಂಭಿಸಿವೆಯಾದರೂ ಫಲಿತಾಂಶ ಮಾತ್ರ ಶೂನ್ಯವಾಗಿದೆ.
ಐದನೇ ದಿನವಾದ ಇಂದು ಲಿಂಗಾರಾಜಪುರದಲ್ಲಿ ಬೆಳಗ್ಗೆಯಿಂದಲೇ ಅಗ್ನಿಶಾಮಕ ದಳ ಮತ್ತು ಅಕ್ಕಪಕ್ಕದ ಸ್ಥಳೀಯರು ಮೃತದೇಹ ಸಿಗಬಹುದು ಎಂಬ ಆಶಯದಿಂದಲೇ ಮತ್ತೊಮ್ಮೆ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಅನುಮಾನ ಬಂದ ಜಾಗದಲ್ಲಿ ಜಾಗರೂಕತೆಯಿಂದ ಶೋಧನೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಅಗ್ನಿಶಾಮಕ ಪಡೆಯ ಸುಮಾರು 75 ಮಂದಿ ಹಾಗೂ 15 ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಬಿಬಿಎಂಪಿ ಪೂರ್ವ ವಲಯದ ಆಯುಕ್ತ ಎಸ್ ಪುಟ್ಟಸ್ವಾಮಿ ತಿಳಿಸಿದ್ದಾರೆ.
ಜನನಾಯಕರ ವಿರುದ್ಧ ತೀವ್ರಗೊಂಡ ಅಸಮಾಧಾನ
ಕಳೆದ ಐದು ದಿನಗಳಿಂದ ಮಗುವನ್ನು ಕಳೆದುಕೊಂಡು ಅಭಿಷೇಕ್ ನ ಕುಟುಂಬ ದುಃಖದ ಮಡುವಿನಲ್ಲಿ ದಿನದೂಡುತ್ತಿದೆ. ಕಳೆದುಕೊಂಡ ಮಗನನ್ನು ಮರಳಿಸಲು ಸಾಧ್ಯವಿಲ್ಲ. ಕನಿಷ್ಟ ಸೌಜನ್ಯಕ್ಕಾದರೂ ಮಗುವಿನ ತಾಯಿಗೆ ಎರಡು ಸಾಂತ್ವನದ ಮಾತಗಳನ್ನು ಹೇಳಲು ಬಾರದ ರಾಜಕೀಯ ನಾಯಕರ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಬಂತೆಂದರೆ ಮತ ಕೇಳಲು ನಾಮುಂದು ತಾಮುಂದು ಎಂದು ಮನೆಮನೆಗೆ ಸುತ್ತುವ ನಾಯಕರು, ಸಂಕಷ್ಟದಲ್ಲಿರುವ ಜನರ ಕಷ್ಟಕ್ಕೆ ಆಗದಿದ್ದರೆ ಹೇಗೆ ಎಂದು ಜನರು ಆಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications