ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!

ಸ್ವತಂತ್ರವಾಗಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಸರಕಾರದ ಆಡಳಿತ ನಿರ್ವಹಣೆಯ ಬಗ್ಗೆ ಆರ್ಎಸ್ಎಸ್ ಕಾಳಜಿ ವಹಿಸುತ್ತದೆ. ಬಿಜೆಪಿಯ ಹೆಚ್ಚಿನ ಶಾಸಕರು ಮತ್ತು ಸಚಿವರು ಆರ್ಎಸ್ಎಸ್ ತತ್ವ ಸಿದ್ದಾಂತವನ್ನು ಪಾಲಿಸಿಕೊಂಡು ಬಂದವರು. ರಾಜ್ಯ ಸರಕಾರದ ಸಚಿವರ ಕಾರ್ಯನಿರ್ವಹಣೆಯ ಮೇಲೆ ನಿಗಾ ಇರಿಸಿರುವ ಆರ್ಎಸ್ಎಸ್, ಕಳೆದ ಒಂದು ವರ್ಷದ ಅವಧಿಯಲ್ಲಿ ಎಲ್ಲಾ ಸಚಿವರ ಇಲಾಖೆಯಲ್ಲಾದ ಅಭಿವೃದ್ದಿಯನ್ನು ಗಮನಿಸಿ ಅರ್ಹತಾ ಅಂಕವನ್ನು ನೀಡುತ್ತದೆ.
ಆರ್ಎಸ್ಎಸ್ ನ ಈ ಸಿದ್ದಾಂತದ ಪ್ರಕಾರ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಗ್ರಾಮೀಣಾಭಿವ್ರದ್ದಿ ಸಚಿವೆ ಶೋಭಾ ಕರಂದ್ಲಾಜೆ ಮೊದಲ ಸ್ಥಾನದಲ್ಲಿದ್ದರೆ ಇಂಧನ ಸಚಿವ ಈಶ್ವರಪ್ಪ 11ನೇ ಸ್ಥಾನದಲ್ಲಿದ್ದಾರೆ. ಅದಲ್ಲದೆ ಈಶ್ವರಪ್ಪ ಪಕ್ಷದ ವಿಕಾಸ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳದೇ ಇದ್ದುದು, ಇತ್ತೀಚಿಗೆ ಪಕ್ಷದ ವಿರುದ್ದ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು, ಲೋಡ್ ಶೆಡ್ಡಿಂಗ್ ವಿಚಾರದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ್ದು ಮುಂತಾದವುಗಳು ಆರ್ಎಸ್ಎಸ್ ಈ ನಿರ್ಧಾರ ತಾಳಲು ಪ್ರಮುಖ ಕಾರಣವೆನ್ನಲಾಗಿದೆ.
ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಣ ಸಂಬಂಧ ಹಾಳಾಗಲು ಮುಖ್ಯವಾಗಿ ಶೋಭಾ ಕರಂದ್ಲಾಜೆ ಕಾರಣವೆನ್ನಲಾಗಿದೆ. ಶೋಭಾಗೆ ಅನಗತ್ಯವಾಗಿ ಮುಖ್ಯಮಂತ್ರಿಗಳು ಪ್ರಾಮುಖ್ಯತೆ ನೀಡುತ್ತಿದ್ದಾರೆ ಎನ್ನುವುದು ಈಶ್ವರಪ್ಪ ಅವರ ದೂರು ಎಂದು ಕೇಶವಕೃಪಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ನಾನು ನನ್ನ ಖಾತೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದೇನೆ. ನನಗೂ ಮುಖ್ಯಮಂತ್ರಿಗಳಿಗೂ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಇಂಧನ ಸಚಿವನಾಗಿ ಮುಂದುವರಿಯುವ ಆಶಯ ಹೊಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications