ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ
ಮುಖ್ಯಮಂತ್ರಿ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಗೌರವ ಕಾಪಾಡಲಿ. ಬಿಜೆಪಿ ನಡೆಸಿದ ಆಪರೇಷನ್ ಕಮಲವೇ ಈಗ ಆ ಪಕ್ಷಕ್ಕೆ ಮುಳುವಾಗಿದೆ. ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ವಿದ್ಯಮಾನಗಳು ಇದಕ್ಕೆ ಸಾಕ್ಷಿ. ಭಿನ್ನಮತ ಉಂಟಾಗಲಿದೆ ಎಂದು ಈ ಹಿಂದೆ ಕಾಂಗ್ರೆಸ್ ಭವಿಷ್ಯ ನುಡಿದಿತ್ತು ಅದು ಈಗ ನಿಜವಾಗುತ್ತಿದೆ. ಭಿನ್ನಮತ ಉಲ್ಬಣಗೊಂಡು ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಬಹುದು ಎಂದು ಸಿದ್ದು ಹೇಳಿದರು.
ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬಗ್ಗೆ ನನಗೇನೂ ತಿಳಿಯದು. ಆ ಸ್ಥಾನದ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಸರಿಯಾಗಿ ಉತ್ತರಿಸಿ ನುಣುಚಿಕೊಂಡರು.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, June 4, 2009, 9:49 [IST]