ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ

By Staff
|
Google Oneindia Kannada News

Siddaramaiah
ಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಗೌರವ ಕಾಪಾಡಲಿ. ಬಿಜೆಪಿ ನಡೆಸಿದ ಆಪರೇಷನ್ ಕಮಲವೇ ಈಗ ಆ ಪಕ್ಷಕ್ಕೆ ಮುಳುವಾಗಿದೆ. ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ವಿದ್ಯಮಾನಗಳು ಇದಕ್ಕೆ ಸಾಕ್ಷಿ. ಭಿನ್ನಮತ ಉಂಟಾಗಲಿದೆ ಎಂದು ಈ ಹಿಂದೆ ಕಾಂಗ್ರೆಸ್ ಭವಿಷ್ಯ ನುಡಿದಿತ್ತು ಅದು ಈಗ ನಿಜವಾಗುತ್ತಿದೆ. ಭಿನ್ನಮತ ಉಲ್ಬಣಗೊಂಡು ಯಡಿಯೂರಪ್ಪ ಅಧಿಕಾರ ಕಳೆದುಕೊಳ್ಳಬಹುದು ಎಂದು ಸಿದ್ದು ಹೇಳಿದರು.

ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿರುವ ಬಗ್ಗೆ ನನಗೇನೂ ತಿಳಿಯದು. ಆ ಸ್ಥಾನದ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಪತ್ರಕರ್ತರ ಪ್ರಶ್ನೆಗೆ ಸರಿಯಾಗಿ ಉತ್ತರಿಸಿ ನುಣುಚಿಕೊಂಡರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X