ಕವಿತಾ ಕೊಲೆ ಪ್ರಕರಣ : ಕೊಲೆಗಾರನ ಬಂಧನ
ಶಿವಮೊಗ್ಗ, ಜೂ. 5 : ಕಳೆದ ಹಲವು ದಿನಗಳ ಹಿಂದೆ ಯುವತಿಯೊರ್ವಳನ್ನು ಕರೆತಂದು ಅತ್ಯಾಚಾರ ಮಾಡಿ ನಂತರ ಕೊಲೆಗೈದು ಕಲ್ಲು ಕೋರೆಯಲ್ಲಿ ಎಸೆದು ಹೋಗಿದ್ದ ಕೊಲೆಗಾರನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದ ಸತೀಶ್(31) ಎಂದು ಗುರುತಿಸಲಾಗಿದೆ. ಈತ ಇದೇ ತಾಲೂಕಿನ ಭದ್ರಾಪುರ ಗ್ರಾಮದ ಕವಿತಾ(20)ಎಂಬಾಕೆಯನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ ಮತ್ತು ಅವಳೊಂದಿಗೆ ದೈಹಿಕ ಸಂಪರ್ಕವಿಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.
ಮೇ 21ರಂದು ಕಲ್ಲು ಗಂಗೂರಿನ ಗೆಳೆಯ ರಾಜು ಎಂಬಾತನ ಮನೆಗೆ ಕವಿತಾಳನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ತಂಬಾಕು ಗೋಡೌನ್ ಎದುರಿನ ಕಲ್ಲು ಕ್ವಾರಿಗೆ ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತೀಶ್ ಈಗ ಪೊಲೀಸರ ವಶದಲ್ಲಿದ್ದು, ಈ ಕೃತ್ಯಕ್ಕೆ ಮೊತ್ತೊಬ್ಬನನ್ನು ಬಳಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆಯಿಂದ ಅದು ತಿಳಿಯಬೇಕಿದೆ. ಮತ್ತೆ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದಲಿಂಗಪ್ಪ, ಪಿಎಸ್.ಐ.ಕೇಶವಮೂರ್ತಿ ತನಿಖೆ ಕೈಗೊಂಡಿದ್ದಾರೆ.
50 ಸಾವಿರ ಮೌಲ್ಯದ ವಾಚ್ ಕಳವು
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಸುಶೀಲ ಹಾಗೂ ಗೋಪಾಲ್ ದಂಪತಿಗಳಿಗೆ ಸೇರಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಗೋಲ್ಡ್ ಕೇಸ್ ವಾಚ್ ಕಳ್ಳತನವಾದ ಘಟನೆ ಗುರುವಾರ ಸನ್ಮಾನ್ ಲಾಡ್ಜ್ನಲ್ಲಿ ನಡೆದಿದೆ.
ಈ ದಂಪತಿಗಳು ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಸನ್ಮಾನ್ ಲಾಡ್ಜ್ನ ರೂಂ.49ನ್ನು ಬಾಡಿಗೆಗೆ ಪಡೆದಿದ್ದರು. ಇಂದು ಬೆಳಿಗ್ಗೆ ಅವರ 50 ಸಾವಿರ ಮೌಲ್ಯದ ವಾಚ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications