ಕವಿತಾ ಕೊಲೆ ಪ್ರಕರಣ : ಕೊಲೆಗಾರನ ಬಂಧನ
ಶಿವಮೊಗ್ಗ, ಜೂ. 5 : ಕಳೆದ ಹಲವು ದಿನಗಳ ಹಿಂದೆ ಯುವತಿಯೊರ್ವಳನ್ನು ಕರೆತಂದು ಅತ್ಯಾಚಾರ ಮಾಡಿ ನಂತರ ಕೊಲೆಗೈದು ಕಲ್ಲು ಕೋರೆಯಲ್ಲಿ ಎಸೆದು ಹೋಗಿದ್ದ ಕೊಲೆಗಾರನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದ ಸತೀಶ್(31) ಎಂದು ಗುರುತಿಸಲಾಗಿದೆ. ಈತ ಇದೇ ತಾಲೂಕಿನ ಭದ್ರಾಪುರ ಗ್ರಾಮದ ಕವಿತಾ(20)ಎಂಬಾಕೆಯನ್ನು ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ ಮತ್ತು ಅವಳೊಂದಿಗೆ ದೈಹಿಕ ಸಂಪರ್ಕವಿಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.
ಮೇ 21ರಂದು ಕಲ್ಲು ಗಂಗೂರಿನ ಗೆಳೆಯ ರಾಜು ಎಂಬಾತನ ಮನೆಗೆ ಕವಿತಾಳನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿಂದ ತಂಬಾಕು ಗೋಡೌನ್ ಎದುರಿನ ಕಲ್ಲು ಕ್ವಾರಿಗೆ ಹೋಗಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತೀಶ್ ಈಗ ಪೊಲೀಸರ ವಶದಲ್ಲಿದ್ದು, ಈ ಕೃತ್ಯಕ್ಕೆ ಮೊತ್ತೊಬ್ಬನನ್ನು ಬಳಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆಯಿಂದ ಅದು ತಿಳಿಯಬೇಕಿದೆ. ಮತ್ತೆ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದಲಿಂಗಪ್ಪ, ಪಿಎಸ್.ಐ.ಕೇಶವಮೂರ್ತಿ ತನಿಖೆ ಕೈಗೊಂಡಿದ್ದಾರೆ.
50 ಸಾವಿರ ಮೌಲ್ಯದ ವಾಚ್ ಕಳವು
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಸುಶೀಲ ಹಾಗೂ ಗೋಪಾಲ್ ದಂಪತಿಗಳಿಗೆ ಸೇರಿದ್ದ ಸುಮಾರು 50 ಸಾವಿರ ರೂ. ಮೌಲ್ಯದ ಗೋಲ್ಡ್ ಕೇಸ್ ವಾಚ್ ಕಳ್ಳತನವಾದ ಘಟನೆ ಗುರುವಾರ ಸನ್ಮಾನ್ ಲಾಡ್ಜ್ನಲ್ಲಿ ನಡೆದಿದೆ.
ಈ ದಂಪತಿಗಳು ನಗರದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಸನ್ಮಾನ್ ಲಾಡ್ಜ್ನ ರೂಂ.49ನ್ನು ಬಾಡಿಗೆಗೆ ಪಡೆದಿದ್ದರು. ಇಂದು ಬೆಳಿಗ್ಗೆ ಅವರ 50 ಸಾವಿರ ಮೌಲ್ಯದ ವಾಚ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications