ಸೋನಿಯಾ ಕ್ಷಮೆಯಾಚಿಸಿದ ಸಂಗ್ಮಾ
ಕಳೆದ ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್ ನಾಯಕರಾಗಿದ್ದ ಶರದ್ ಪವಾರ್, ಪಿ ಎ ಸಂಗ್ಮಾ ಮತ್ತು ತಾರೀಕ್ ಅನ್ವರ್ ಅವರುಗಳು ಸೋನಿಯಾ ಗಾಂಧಿ ಅವರ ವಿದೇಶಿ ಮೂಲವನ್ನು ಪ್ರಶ್ನಿಸಿ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದ್ದರು. ನೂರು ವರ್ಷಗಳಷ್ಟು ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ವಿದೇಶ ಮೂಲಕ ಮಹಿಳೆಯೊಬ್ಬರು ಉನ್ನತ ಸ್ಥಾನ ಅಲಂಕರಿಸಲು ಈ ನಾಯಕರು ವಿರೋಧಿಸಿದ್ದರು. ಇದರಿಂದಾಗಿ ಅಂದು ಶರದ್ ಪವಾರ್, ಸಂಗ್ಮಾ ಮತ್ತು ತಾರೀಕ್ ಅನ್ವರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ನಂತರ ಈ ಮೂವರು ಸೇರಿಕೊಂಡು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ರಚನೆ ಮಾಡಿದ್ದು, ಮತ್ತೆ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿ ಸಚಿವರಾಗಿದ್ದು ಎಲ್ಲವೂ ಹಳೆಯ ಸುದ್ದಿಯಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಂಗ್ಮಾ ಅವರು, ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಕಳೆದ ಹತ್ತು ವರ್ಷದ ಹಿಂದೆ ನಡೆದ ಕಹಿ ಘಟನೆ ಮರೆತು, ನನ್ನ ತಪ್ಪು ಮನ್ನಿಸಿ ಎಂದು ಮನವಿ ಮಾಡಿಕೊಂಡಿರುವೆ. ಸೋನಿಯಾ ಅವರ ವಿದೇಶಿ ಮೂಲ ಪ್ರಶ್ನಿಸಿದ್ದು ಶುದ್ದ ತಪ್ಪು ಎಂದು ಅವರು ವಿವರಿಸಿದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಮೇಘಾಲಯದ ಗಯಾ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಸಂಗ್ಮಾ ಮಗಳು ಅಗಾಥಾ ಸಂಗ್ಮಾ ಅವರು ಮನಮೋಹನ್ ಸಿಂಗ್ ನೇತೃತ್ವ ಕೇಂದ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವೆಯಾಗಿದ್ದಾರೆ. ಯುಪಿಎ ಸರಕಾರದ ಅತ್ಯಂತ ಕಿರಿಯ ಸಚಿವೆ ಎಂಬ ಹೆಗ್ಗಳಿಕೆಗೂ ಅವರ ಬಾಜನರಾಗಿದ್ದಾರೆ.
(ಏಜನ್ಸೀಸ್)