ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದ್ದು, ಮೋರಿಯಲ್ಲಿ ಬಾಲನ ಕೊಚ್ಚಿ ಹೋಗಿರುವುದು ವಿಷಾದಕರ ಸಂಗತಿ ಎಂದರು. ಬಾಲಕ ಅಭಿಷೇಕ್ ನಿಗೆ 1 ಲಕ್ಷ ರುಪಾಯಿ ಪರಿಹಾರ ಘೋಷಿಸಲಾಗಿದ್ದು, ಅತನ ಸಹೋದರಿಯ ಶಿಕ್ಷಣಕ್ಕೆ 1 ಲಕ್ಷ ರುಪಾಯಿಯನ್ನು ಠೇವಣಿ ಇಡುವುದಾಗಿ ಹೇಳಿದರು.
ಮೋರಿಗಳಲ್ಲಿ ಬಾಲಕನ ಕೊಚ್ಚಿಕೊಂಡು ಹೋಗಿರುವುದು. ಆರು ದಿನ ಕಳೆದರೂ ಮಗುವಿನ ಮೃತದೇಹ ಪತ್ತೆಯಾಗದಿರುವುದು ಆತಂಕಕಾರಿ ಸಂಗತಿ. ಈ ವಿಷಯದಲ್ಲಿ ಬಿಬಿಎಂಪಿ ಸಮರ್ಥವಾಗಿ ಕಾರ್ಯನಿರ್ವಹಿಸಿದೆ. ಪಾಲಿಕೆ ಆಯುಕ್ತ ಸುಬ್ರಮಣ್ಯ ಅವರು ಮಗುವಿನ ಮೃತದೇಹ ಪತ್ತೆ ಹಚ್ಚಲು ಶಕ್ತಿಮೀರಿ ಶ್ರಮ ವಹಿಸಿದ್ದಾರಕೆ. ಆದರೆ, ದುರದೃಷ್ಟವಶಾತ್ ಮಗು ಪತ್ತೆಯಾಗದಿರುವುದು ಅತ್ಯಂತ ನೋವಿನ ಸಂಗತಿ ಎಂದರು. ಮಗುವನ್ನು ಕಳೆದುಕೊಂಡ ತಾಯಿ ವೇದನೆ, ಸಂಕಟ ಆರ್ಥವಾಗುತ್ತೆ. ಆದರೆ, ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಯಡಿಯೂರಪ್ಪ ವಿವರಿಸಿದರು.
ಘಟನೆಯನ್ನು ಯಾರೂ ರಾಜಕೀಕರಣಗೊಳಸಬಾರದು.ಇಂತಹ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಬೆಂಗಳೂರಿನಲ್ಲಿರುವ ಮೋರಿಗಳ ದುರಸ್ತಿ ಹಾಗೂ ಅಭಿವೃದ್ಧಿ ಸರಕಾರ ಶೀಘ್ರವೇ ಕ್ರಮಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳಲ್ಲಿ ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಅಭಿಷೇಕ್ ಮನೆಗೆ ತೆರಳಿದ ಮುಖ್ಯಮಂತ್ರಿಗಳೊಂದಿಗೆ ಸಾರಿಗೆ ಸಚಿವ ಆರ್ ಅಶೋಕ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications