ಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದ್ದು, ಮೋರಿಯಲ್ಲಿ ಬಾಲನ ಕೊಚ್ಚಿ ಹೋಗಿರುವುದು ವಿಷಾದಕರ ಸಂಗತಿ ಎಂದರು. ಬಾಲಕ ಅಭಿಷೇಕ್ ನಿಗೆ 1 ಲಕ್ಷ ರುಪಾಯಿ ಪರಿಹಾರ ಘೋಷಿಸಲಾಗಿದ್ದು, ಅತನ ಸಹೋದರಿಯ ಶಿಕ್ಷಣಕ್ಕೆ 1 ಲಕ್ಷ ರುಪಾಯಿಯನ್ನು ಠೇವಣಿ ಇಡುವುದಾಗಿ ಹೇಳಿದರು.
ಮೋರಿಗಳಲ್ಲಿ ಬಾಲಕನ ಕೊಚ್ಚಿಕೊಂಡು ಹೋಗಿರುವುದು. ಆರು ದಿನ ಕಳೆದರೂ ಮಗುವಿನ ಮೃತದೇಹ ಪತ್ತೆಯಾಗದಿರುವುದು ಆತಂಕಕಾರಿ ಸಂಗತಿ. ಈ ವಿಷಯದಲ್ಲಿ ಬಿಬಿಎಂಪಿ ಸಮರ್ಥವಾಗಿ ಕಾರ್ಯನಿರ್ವಹಿಸಿದೆ. ಪಾಲಿಕೆ ಆಯುಕ್ತ ಸುಬ್ರಮಣ್ಯ ಅವರು ಮಗುವಿನ ಮೃತದೇಹ ಪತ್ತೆ ಹಚ್ಚಲು ಶಕ್ತಿಮೀರಿ ಶ್ರಮ ವಹಿಸಿದ್ದಾರಕೆ. ಆದರೆ, ದುರದೃಷ್ಟವಶಾತ್ ಮಗು ಪತ್ತೆಯಾಗದಿರುವುದು ಅತ್ಯಂತ ನೋವಿನ ಸಂಗತಿ ಎಂದರು. ಮಗುವನ್ನು ಕಳೆದುಕೊಂಡ ತಾಯಿ ವೇದನೆ, ಸಂಕಟ ಆರ್ಥವಾಗುತ್ತೆ. ಆದರೆ, ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಯಡಿಯೂರಪ್ಪ ವಿವರಿಸಿದರು.
ಘಟನೆಯನ್ನು ಯಾರೂ ರಾಜಕೀಕರಣಗೊಳಸಬಾರದು.ಇಂತಹ ವಿಷಯದಲ್ಲಿ ರಾಜಕೀಯ ಸರಿಯಲ್ಲ. ಬೆಂಗಳೂರಿನಲ್ಲಿರುವ ಮೋರಿಗಳ ದುರಸ್ತಿ ಹಾಗೂ ಅಭಿವೃದ್ಧಿ ಸರಕಾರ ಶೀಘ್ರವೇ ಕ್ರಮಕೈಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳಲ್ಲಿ ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಹೇಳಿದರು. ಅಭಿಷೇಕ್ ಮನೆಗೆ ತೆರಳಿದ ಮುಖ್ಯಮಂತ್ರಿಗಳೊಂದಿಗೆ ಸಾರಿಗೆ ಸಚಿವ ಆರ್ ಅಶೋಕ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications