ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಕನಸು ನನಸಾಗುವ ಕಾಲ ಬಂದಿದೆ

By Staff
|
Google Oneindia Kannada News

Siddu's dream may come true
ಬೆಂಗಳೂರು, ಜೂ.6: ವಿರೋಧ ಪಕ್ಷದ ನಾಯಕನ ಹುದ್ದೆಗೆ ಹಲವಾರು ದಿನಗಳಿಂದ ತಹತಹಿಸುತ್ತಿದ್ದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಡೆಗೂ ಕಾಲ ಕೂಡಿ ಬಂದಿದೆ. ಭಾನುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದು ಆಯ್ಕೆಯಾಗಲಿದ್ದಾರೆ.

ಹೈಕಮಾಂಡ್ ಭರವಸೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸಿದ್ದುರನ್ನು ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ ಸಂಪ್ರದಾಯದಂತೆ ಶಾಸಕರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಉಸ್ತುವಾರಿ ಗುಲಾಂನಬಿ ಆಜಾದ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ನಲ್ಲಿ ಕೊನೆಕ್ಷಣದಲ್ಲಾಗುವ ಬದಲಾವಣೆಗಳನ್ನು ತಳ್ಳಿಹಾಕಿದರೆ ಸಿದ್ದು ಆಸೆ ಭಾನುವಾರ ಕೈಗೂಡಲಿದೆ. ಕಳೆದ ಎರಡು ಮೂರು ವರ್ಷಗಳಿಂದ ಸಿದ್ದರಾಮಯ್ಯ ಅನೇಕ ಕಸರತ್ತುಗಳನ್ನು ಮಾಡಿ ವಿಫಲರಾಗಿದ್ದರು. ಈಗ ಹೈಕಮಾಂಡ್ ನೀಡಿದ ಭರವಸೆಯನ್ನು ಈಡೇರಿಸುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಸಿದ್ದು ಬೆಂಬಲಿಗರಲ್ಲಿ ಕುತೂಹಲ ಮನೆಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X