Get Updates
Get notified of breaking news, exclusive insights, and must-see stories!

ಸಿಎಂ ಮನೆ ಮುಂದೆ ಜೆಡಿಎಸ್ ಧರಣಿ 9ಕ್ಕೆ

YSV Datta
ಬೆಂಗಳೂರು, ಜೂ. 7: ಅಭಿವೃದ್ಧಿ ವಿಷಯದಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ಸರಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಜೆಡಿಎಸ್, ಜೂ.9 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಕುರಿತು ಕಿಂಚಿತ್ತೂ ಗಮನ ಹರಿಸಿಲ್ಲ. ಸರಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರವೈ.ಎಸ್.ವಿ. ದತ್ತ, ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ್ ಮತ್ತು ಶಾಸಕ ಕರಡಿ ಸಂಗಣ್ಣ ಸುದ್ದಿಗೋಷ್ಠಿಯಲ್ಲಿ ಶನಿವಾರ ಎಚ್ಚರಿಕೆ ನೀಡಿದರು.

ಬೀದರ್, ರಾಯಚೂರು, ಗುಲ್ಬರ್ಗ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಹಿಂದೆಲ್ಲ ಹೈ.ಕ. ಭಾಗ ವನ್ನು ಗುತ್ತಿಗೆ ಪಡೆದವರಂತೆ ವರ್ತಿಸಿದ್ದ ಮತ್ತು ಗುಲ್ಬರ್ಗದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಸಿದ್ದ ಸರಕಾರ, ಈಗ ಯಾವುದೇ ಕಾರ್ಯಕ್ರಮ ಅನುಷ್ಠಾನಗೊಳಿಸಿಲ್ಲ. ಘೋಷಿಸಿದ್ದ ಕಾರ್ಯಕ್ರಮಗಳಿಗೂ ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದರು. ಡಾ. ನಂಜುಂಡಪ್ಪ ವರದಿಯ ಶಿಫಾರಸಿನಂತೆ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ 2,647 ಕೋಟಿ ರು. ನೀಡುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ರೂ,ಕೊಟ್ಟಿರು ವುದು ಕೇವಲ ನೂರು ಕೋಟಿ ರೂ. ಮಾತ್ರ ಎಂದರು.

ಸುರಪುರ ತಾಲೂಕಿನಲ್ಲಿ ವಿಚಿತ್ರ ಕ್ಯಾನ್ಸರ್ ಕಾಣಿಸಿಕೊಂಡಿದೆ. ಆದರೆ, ಆರೋಗ್ಯ ಸಚಿವರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಮಾಹಿತಿ ಹಾಗೂ ಅಂಕಿ-ಅಂಶವುಳ್ಳ ಹೇಳಿದ್ದೇನು, ಮಾಡಿದ್ದೇನು' ಹೊತ್ತಿಗೆಯನ್ನು ಜೂ.9 ರಂದು ಬಿಡುಗಡೆ ಮಾಡಲಾಗುವುದು ಎಂದರು.ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ವಿವರಿಸಿದರು.

(ದಟ್ಸ್ ಕನ್ನಡವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+