ಲೋಕಾಯುಕ್ತರ ವಿರುದ್ಧದ ಕೇಸ್ ವಾಪಸ್ಸು

ಕಳೆದ ಮೇ 31 ರಂದು ಮಳೆಯಲ್ಲಿ ಕೊಚ್ಚಿ ಹೋದ ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ ಹೇಳಿದ್ದರು.
ಬಿಬಿಎಂಪಿ ಕಾರ್ಯ ವೈಖರಿಗೆ ಲೋಕಾಯುಕ್ತರು ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ, ಲೋಕಾಯುಕ್ತರು ಇಡೀ ವ್ಯವಸ್ಥೆಯೊಂದನ್ನೇ ತರಾಟೆಗೆ ತೆಗೆದುಕೊಂಡಿಲ್ಲ. ತಮ್ಮ ವಿರುದ್ಧ ದೋಷಾರೋಪಣೆ ಮಾಡಿ ನೋವುಂಟು ಮಾಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು 5 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದರು.
ಲೋಕಾಯುಕ್ತರು, ಡಾ. ಸುಬ್ರಹ್ಮಣ್ಯ ಈ ಪ್ರಕರಣ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅವರಿಗೆ ಮಾನವೀಯತೆ ಇಲ್ಲ' ಎಂದಿದ್ದಾರೆ. ಇದು ಯಾವುದೇ ವ್ಯಕ್ತಿಯ ವರ್ಚಸ್ಸು ಕುಗ್ಗಿಸುವ ಮಾತಾಗಿದೆ. ಹೀಗಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರ ಪರ ವಕೀಲರು ತಿಳಿಸಿದ್ದಾರೆ. ಮನಸ್ಸಿಗೆ ನೋವಾಗಿದೆ ಈ ಬಗ್ಗೆ ಡಾ. ಸುಬ್ರಹ್ಮಣ್ಯ ಅವರ ಗಮನ ಸೆಳೆದಾಗ, ಲೋಕಾಯುಕ್ತರ ದೋಷಾರೋಪದಿಂದ ಮನಸ್ಸಿಗೆ ಬಹಳ ಬೇಸರವಾಗಿದೆ ಎಂದಿದ್ದರು.
ಮೋರಿಯಲ್ಲಿ ಬಿದ್ದು ಅಭಿಷೇಕ್ ಪ್ರಾಣ ಹೋಗಿದ್ದಕ್ಕೆ ನನಗೂ ತೀವ್ರ ದುಃಖವಾಗಿದೆ. ಆತನ ಪತ್ತೆಗೆ ಅಂದು ರಾತ್ರಿಯಿಂದಲೇ ತೀವ್ರ ಯತ್ನ ನಡೆಸಲಾಗಿದೆ. ಆದರೆ, ನನ್ನೊಬ್ಬನನ್ನೇ ಹೊಣೆಯಾಗಿಸಿ ದೂಷಿಸಿದ್ದು ಸರಿ ಕಾಣಲಿಲ್ಲ' ಎಂದು ಪ್ರತಿಕ್ರಿಯಿಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications