ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತರ ವಿರುದ್ಧದ ಕೇಸ್ ವಾಪಸ್ಸು

By Staff
|
Google Oneindia Kannada News

Santosh Hegde
ಬೆಂಗಳೂರು, ಜೂ. 8 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಎಂ ಸಂತೋಷ ಹೆಗ್ಡೆ ಅವರ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಹಿಂದಕ್ಕೆ ಪಡೆಯಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಮೊಕದ್ದಮೆಯನ್ನು ವಾಪಸ್ಸು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಳೆದ ಮೇ 31 ರಂದು ಮಳೆಯಲ್ಲಿ ಕೊಚ್ಚಿ ಹೋದ ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ ಹೇಳಿದ್ದರು.

ಬಿಬಿಎಂಪಿ ಕಾರ್ಯ ವೈಖರಿಗೆ ಲೋಕಾಯುಕ್ತರು ಅಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ, ಲೋಕಾಯುಕ್ತರು ಇಡೀ ವ್ಯವಸ್ಥೆಯೊಂದನ್ನೇ ತರಾಟೆಗೆ ತೆಗೆದುಕೊಂಡಿಲ್ಲ. ತಮ್ಮ ವಿರುದ್ಧ ದೋಷಾರೋಪಣೆ ಮಾಡಿ ನೋವುಂಟು ಮಾಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು 5 ನೇ ಎಸಿಎಂಎಂ ನ್ಯಾಯಾಲಯದಲ್ಲಿ ಈ ಪ್ರಕರಣ ದಾಖಲಿಸಿದ್ದರು.

ಲೋಕಾಯುಕ್ತರು, ಡಾ. ಸುಬ್ರಹ್ಮಣ್ಯ ಈ ಪ್ರಕರಣ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅವರಿಗೆ ಮಾನವೀಯತೆ ಇಲ್ಲ' ಎಂದಿದ್ದಾರೆ. ಇದು ಯಾವುದೇ ವ್ಯಕ್ತಿಯ ವರ್ಚಸ್ಸು ಕುಗ್ಗಿಸುವ ಮಾತಾಗಿದೆ. ಹೀಗಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರ ಪರ ವಕೀಲರು ತಿಳಿಸಿದ್ದಾರೆ. ಮನಸ್ಸಿಗೆ ನೋವಾಗಿದೆ ಈ ಬಗ್ಗೆ ಡಾ. ಸುಬ್ರಹ್ಮಣ್ಯ ಅವರ ಗಮನ ಸೆಳೆದಾಗ, ಲೋಕಾಯುಕ್ತರ ದೋಷಾರೋಪದಿಂದ ಮನಸ್ಸಿಗೆ ಬಹಳ ಬೇಸರವಾಗಿದೆ ಎಂದಿದ್ದರು.

ಮೋರಿಯಲ್ಲಿ ಬಿದ್ದು ಅಭಿಷೇಕ್ ಪ್ರಾಣ ಹೋಗಿದ್ದಕ್ಕೆ ನನಗೂ ತೀವ್ರ ದುಃಖವಾಗಿದೆ. ಆತನ ಪತ್ತೆಗೆ ಅಂದು ರಾತ್ರಿಯಿಂದಲೇ ತೀವ್ರ ಯತ್ನ ನಡೆಸಲಾಗಿದೆ. ಆದರೆ, ನನ್ನೊಬ್ಬನನ್ನೇ ಹೊಣೆಯಾಗಿಸಿ ದೂಷಿಸಿದ್ದು ಸರಿ ಕಾಣಲಿಲ್ಲ' ಎಂದು ಪ್ರತಿಕ್ರಿಯಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X