ಲೋಕಸಭೆ ಉಪಸಭಾಧ್ಯಕ್ಷರಾಗಿ ಕರಿಯಾ ಮುಂಡಾ
ನವದೆಹಲಿ,
ಜೂ. 8 : ಜಾರ್ಖಂಡ್ ನ ಕುಂತಿ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ಕರಿಯಾ ಮುಂಡಾ ಲೋಕಸಭೆಯ ಉಪಸಭಾಧ್ಯಕ್ಷರಾಗಿ ಇಂದು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಕುಂತಿ ಲೋಕಸಭೆ ಕ್ಷೇತ್ರದಿಂದ ಸತತ ಆರು ಸಲ ಸಂಸದರಾಗಿ ಆಯ್ಕೆಯಾಗಿರುವ ಮುಂಡಾ, ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿದ್ದಾರೆ. id="toptextpromo">ಕಾಂಗ್ರೆಸ್
ನೇತೃತ್ವದ ಯುಪಿಎ ಸರಕಾರ ವಿರೋಧಿ ಒಕ್ಕೂಟವಾದ ಎನ್ ಡಿಎಗೆ ಲೋಕಸಭೆ ಉಪಸಭಾಧ್ಯಕ್ಷ ಸ್ಥಾನವನ್ನು ನೀಡಿತ್ತು. ಪ್ರತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಪರ ಅಭ್ಯರ್ಥಿಯಾಗಿ ಬುಡಕಟ್ಟು ನಾಯಕ ಕರಿಯಾ ಮುಂಡಾ ಅವರನ್ನು ಆಯ್ಕೆ ಮಾಡುವಂತೆ ಬಿಜೆಪಿ ಮನವಿ ಮಾಡಿತ್ತು. ನಿರೀಕ್ಷೆಯಂತೆ ಇಂದು ಕರಿಯಾ ಮುಂಡಾ ಲೋಕಸಭೆ ಉಪಸಭಾಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಸ್ನಾತಕೋತ್ತರ ಪದವೀಧರರಾಗಿದ್ದು, ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ 1936 ರಲ್ಲಿ ಜನಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications