ಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ

H Vishwanath
ಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ ಗಂಡಸರು ಯಾರೂ ಇಲ್ವಾ ಎಂದು ಅವರು ಪ್ರಶ್ನಿಸಿದರು.

ಸತತ ನಾಲ್ಕು ಬಾರಿ ಶಾಸಕರಾಗಿ ಶಂಕರಲಿಂಗೇಗೌಡರು, ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ರಾಮದಾಸ್ ಅವರಿಗೆ ಅನುಭವವಿದೆ. ಇಬ್ಬರೂ ಬುದ್ಧಿವಂತಿಕೆಯಲ್ಲಿ ಕಡಿಮೆ ಏನಿಲ್ಲ. ಅವರಿಗೂ ಒಂದು ಅವಕಾಶ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಶ್ವನಾಥ್ ಒತ್ತಾಯಿಸಿದರು.

ಕಳೆದ ಬಾರಿ ದಸರಾ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶೋಭಾ ಕರಂದ್ಲಾಜೆ ಉತ್ತಮ ಕೆಲಸ ಮಾಡಿದ್ದಾರೆ. ಆಡಳಿತ ವಿಷಯದಲ್ಲಿ ನಾನೆಂದೂ ರಾಜಕೀಯ ಮಾಡಲು ಹೋಗುವುದಿಲ್ಲ. ಆದರೆ ಸ್ವತ ಸಚಿವರೇ ಉಸ್ತುವಾರಿ ಸ್ಥಾನದಿಂದ ಕೈಬಿಡಿ ಎಂದು ಕೇಳಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸ್ಥಳೀಯ ಬಿಜೆಪಿ ಶಾಸಕನ್ನು ಹೆಸರಿಸಿದ್ದೇನೆ ಅಷ್ಟೇ ಎಂದು ವಿಶ್ವನಾಥ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+