ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ

By Staff
|
Google Oneindia Kannada News

H Vishwanath
ಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ ಗಂಡಸರು ಯಾರೂ ಇಲ್ವಾ ಎಂದು ಅವರು ಪ್ರಶ್ನಿಸಿದರು.

ಸತತ ನಾಲ್ಕು ಬಾರಿ ಶಾಸಕರಾಗಿ ಶಂಕರಲಿಂಗೇಗೌಡರು, ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ರಾಮದಾಸ್ ಅವರಿಗೆ ಅನುಭವವಿದೆ. ಇಬ್ಬರೂ ಬುದ್ಧಿವಂತಿಕೆಯಲ್ಲಿ ಕಡಿಮೆ ಏನಿಲ್ಲ. ಅವರಿಗೂ ಒಂದು ಅವಕಾಶ ನೀಡಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿಶ್ವನಾಥ್ ಒತ್ತಾಯಿಸಿದರು.

ಕಳೆದ ಬಾರಿ ದಸರಾ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶೋಭಾ ಕರಂದ್ಲಾಜೆ ಉತ್ತಮ ಕೆಲಸ ಮಾಡಿದ್ದಾರೆ. ಆಡಳಿತ ವಿಷಯದಲ್ಲಿ ನಾನೆಂದೂ ರಾಜಕೀಯ ಮಾಡಲು ಹೋಗುವುದಿಲ್ಲ. ಆದರೆ ಸ್ವತ ಸಚಿವರೇ ಉಸ್ತುವಾರಿ ಸ್ಥಾನದಿಂದ ಕೈಬಿಡಿ ಎಂದು ಕೇಳಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸ್ಥಳೀಯ ಬಿಜೆಪಿ ಶಾಸಕನ್ನು ಹೆಸರಿಸಿದ್ದೇನೆ ಅಷ್ಟೇ ಎಂದು ವಿಶ್ವನಾಥ್ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X