ಎನ್ಸಿಪಿ ಕೈಬಿಟ್ಟ ಕಾಂಗ್ರೆಸ್, ಏಕಾಂಗಿ ಸ್ಪರ್ಧೆಗೆ ಚಿಂತನೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ವಿಲಾಸ್ ರಾವ್ ದೇಶಮುಖ್, ಕಾಂಗ್ರೆಸ್ ನಾಯಕ ಪವನರಾಜೇ ನಿಂಬಾಲ್ಕರ್ ಅವರ ಕೊಲೆ ಪ್ರಕರಣದಲ್ಲಿ ಎನ್ ಸಿಪಿ ಸಂಸದ ಪದಮ್ ಸಿನ್ಹಾ ಪಾಟೀಲ್ ಬಂಧನಕ್ಕೊಳಗಾಗಿರುವುದು ದುರದೃಷ್ಟಕರ. ಈ ಪ್ರಕರಣ ಸರಕಾರದ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದು ಮುಂಬರುವ ಚುನಾವಣೆಗಳ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ಎನ್ ಸಿಪಿ ಮೈತ್ರಿಯನ್ನು ಕಡಿದುಕೊಳ್ಳುವ ಚಿಂತನೆ ನಡೆಸಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಅಖಾಡಕ್ಕೆ ಇಳಿಯಲಿದೆ ಎಂದು ಹೇಳಿದರು.
ಅತ್ತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳು ಸರಕಾರದ ವಿರುದ್ದ ಪ್ರತಿಭಟನೆ ಮುಂದುವರೆಸಿದ್ದು, ಗೃಹ ಸಚಿವರ ರಾಜಿನಾಮೆಗೆ ಆಗ್ರಹಿಸುತ್ತಿವೆ. ಆದರೆ, ಎನ್ ಸಿಪಿ ನಾಯಕ ಶರದ್ ಪವಾರ್ ಮಾತ್ರ ಬಂಧನಕ್ಕೊಳಗಾಗಿರುವ ಪದಮ್ ಸಿನ್ಹಾ ಪಾಟೀಲ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಸುತರಾಂ ಒಪ್ಪುತ್ತಿಲ್ಲ. ಅದು ಕಾನೂನು ವಿಚಾರವಾಗಿದ್ದರಿಂದ ಅದರಲ್ಲಿ ನಾವು ತೆಲೆ ಹಾಕುವುದಿಲ್ಲ ಎಂದು ಹೇಳಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಮುಂದಾಲೋಚನೆ ಮಾಡಿ ಎನ್ ಸಿಪಿಯೊಂದಿಗಿನ ಮೈತ್ರಿ ಕಡಿದುಕೊಳ್ಳಲು ಸಿದ್ಧತೆ ನಡೆಸಿದೆ.
(ಏಜನ್ಸೀಸ್)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications