ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ

By Staff
|
Google Oneindia Kannada News

SM Krishna
ನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಸೋಮವಾರ ಸಂಜೆ ಆಸ್ಟ್ರೇಲಿಯಾದ 20 ವರ್ಷದ ಯುವಕನೊಬ್ಬ ಮೂವರು ಭಾರತೀಯ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ, ಕಪ್ಪು ಬಣ್ಣದ ಜನರೇ ನಮ್ಮ ದೇಶವನ್ನು ಬಿಟ್ಟು ಸ್ವದೇಶಕ್ಕೆ ತೆರಳಿ ಎಂದಿದ್ದಕ್ಕೆ ಕೋಪಗೊಂಡ ಭಾರತೀಯ ವಿದ್ಯಾರ್ಥಿಗಳು ಆತನ ಮೇಲೆ ಮಾರಣಾಂತಿಕ ದಾಳಿ ನಡೆಸಿ ಸೇಡು ತೀರಿಸಿಕೊಂಡಿದ್ದಾರೆ.

ಈ ಬೆಳವಣಿಗೆಯಿಂದ ಭಾರತ ಮತ್ತು ಆಸ್ಟ್ರೇಲಿಯಾ ವಿದ್ಯಾರ್ಥಿಗಳ ನಡುವೆ ಉಂಟಾಗಿರುವ ಮನಸ್ತಾಪ ಹೆಚ್ಚಾಗಲಿದೆ. ಭಾರತೀಯ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಅಲ್ಲಿ ತೆರಳಿದ್ದು, ನಿಮ್ಮ ಅಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ಕೃಷ್ಣ ಸಲಹೆ ನೀಡಿದ್ದಾರೆ. ಆಸ್ಟ್ರೇಲಿಯನ್ನರ ಮೇಲೆ ದಾಳಿ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X