ರ್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ

ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ ಗ್ರಾಮದವನಾದ ದೇವೇಂದರ್ ಕುಮಾರ್ ಹೈದರಾಬಾದ್ ನ ಇಬ್ರಾಹಿಂಬಾಗ್ ನಲ್ಲಿರುವ ವಾಸವಿ ಇಂಜಿನಿಯರಿಂಗ್ ಕಾಲೇಜಿನ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯಾಗಿದ್ದ. ಹಿರಿಯ ವಿದ್ಯಾರ್ಥಿಗಳ ಕಿರುಕುಳದಿಂದ ತನ್ನ ಮಗ ರೈಲು ಹಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.
ರ್ಯಾಗಿಂಗ್ ಕುರಿತಂತೆ ಅನೇಕ ಸಾರಿ ಕಾಲೇಜ್ ಆಡಳಿತ ಮಂಡಳಿ ಗಮನಕ್ಕೆ ತಂದರೂ ಸೂಕ್ತ ಕ್ರಮಕೈಗೊಳ್ಳುವಲ್ಲಿ ಸಂಬಂಧಿಸಿದವರು ವಿಫಲವಾಗಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಶಂಕರಯ್ಯ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜ್ ಆಡಳಿತ ಮಂಡಳಿಯ ಬೇಜವಾಬ್ದಾರಿತನವನ್ನ ಖಂಡಿಸಿದ್ದಲ್ಲದೇ, ಪೊಲೀಸ್ ಠಾಣೆಗೆ ದೂರು ದಾಖಲಿಸುವುದಾಗಿ ಅವರು ತಿಳಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications