ಟಿ20 ವಿಶ್ವಕಪ್ ನಿಂದ ಕಾ೦ಗರೋ ಪಡೆ ಔಟ್

ಲೀಗ್ ಹಂತದ ಗೆಲ್ಲಲೇ ಬೇಕಾಗಿದ್ದ ತನ್ನ ಕೊನೆಯ ಪಂದ್ಯದಲ್ಲಿ ಪಂಟರ್ ಪಡೆ ಶ್ರೀಲಂಕಾ ತಂಡದ ವಿರುದ್ದ ಆರು ವಿಕೆಟ್ ಗಳ ಸೋಲು ಅನುಭವಿಸಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ತಂಡದ ಪರವಾಗಿ ಡೇವಿಡ್ ಹಸ್ಸಿ ಮತ್ತು ಜಾನ್ಸನ್ ತಲಾ 28, ಪಾಂಟಿಂಗ್ 25 ಮತ್ತು ವಾಟ್ಸನ್ 22 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಶ್ರೀಲಂಕಾ ಇನ್ನು ಒಂದು ಓವರ್ ಬಾಕಿ ಇರುತ್ತಲೇ ನಾಲ್ಕು ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತು. ಜಯಸೂರ್ಯ ಅವರ ವಿಕೆಟ್ ಅನ್ನು ಬೇಗನೆ ಕಳೆದುಕೊಂಡರೂ ಆರಂಭಿಕ ಆಟಗಾರ ದಿಲ್ಶನ್ (53) ಮತ್ತು ನಾಯಕ ಸಂಗಕ್ಕರ (55) ಅವರ ಸಮಯೋಜಿತ ಜೊತೆಯಾಟದಿಂದ ಭರ್ಜರಿ ಜಯ ಸಾಧಿಸಿತು. ಸಂಗಕ್ಕರ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದರು. ನಿನ್ನೆ ನಡೆದ ಇನ್ನೊಂದು ಪಂದ್ಯದಲ್ಲಿ ಐರ್ಲೆ೦ಡ್ ತಂಡ ಬಾಂಗ್ಲಾದೇಶವನ್ನು ಸೋಲಿಸಿತ್ತು. ಇದರಿಂದ ಬಾಂಗ್ಲಾದೇಶ ಕೂಟದಿಂದ ಹೊರಬಿದ್ದಿದ್ದು ಗ್ರೂಪ್ ಎ ನಿಂದ ಭಾರತ ಮತ್ತು ಐರ್ಲೆ೦ಡ್ ತಂಡ ಸೂಪರ್ 8 ಹಂತ ತಲುಪಿದೆ.
(ದಟ್ಸ್ ಕನ್ನಡ ಕ್ರೀಡಾವಾರ್ತೆ)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications