ಉಪಪ್ರಾಂಶುಪಾಲರನ್ನು ಕೊಲೆಗೈದ ಮ್ಯಾನೇಜರ್
ಮೈಸೂರು ಜೂ 11: ಇಲ್ಲಿನ ಶಾರದಾ ವಿಲಾಸ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪುಟ್ಟಣ್ಣ ಎನ್ನುವವರು ಕಾಲೇಜ್ ನ ಉಪಪ್ರಾಂಶುಪಾಲರಾದ ಚಂದ್ರಲೇಖಾ ಎನ್ನುವವರನ್ನು ಕೊಲೆಗೈದಿರುವ ಘಟನೆ ನಿನ್ನೆ ನಡೆದಿದೆ. ಕೆಲಸಕ್ಕೆ ಸರಿಯಾದ ಸಮಯದಲ್ಲಿ ಹಾಜರಾಗದೇ ಇರುವುದು ಮತ್ತು ಕೆಲಸದ ವೇಳೆ ಕಾಲೇಜ್ ನಲ್ಲಿ ಇಲ್ಲದಿರುವ ಕಾರಣಕ್ಕಾಗಿ ಚಂದ್ರಲೇಖ ಅವರು ಪುಟ್ಟಣ್ಣ ಅವರನ್ನು ಕೆಲಸದಿಂದ ವಜಾ ಮಾಡಿದ್ದರು.
ನಿನ್ನೆ 11 ಘಂಟೆಯ ಸುಮಾರಿಗೆ ಉಪಪ್ರಾಂಶುಪಾಲರ ಕಚೇರಿಯಿಂದ ಪುಟ್ಟಣ್ಣ ಅವರಿಗೆ ಕೆಲಸ ವಜಾಗೊಂಡ ಆದೇಶ ತಲುಪಿತು. ಇದರಿಂದ ಕೋಪಗೊಂಡ ಪುಟ್ಟಣ್ಣ ಮೊದಲು ಚಂದ್ರಲೇಖಾ ಅವರ ನಾಲಗೆಯನ್ನು ಕತ್ತರಿಸಿ ನಂತರ ಅವರನ್ನು ಚಾಕುವಿನಿಂದ ತಿವಿದ. ಚಂದ್ರಲೇಖ ಅವರು ತಮ್ಮ ಕೊಠಡಿಯಲ್ಲೇ ಸಾವನ್ನಪ್ಪಿದರು. ವಿಷಯ ತಿಳಿದ ಕಾಲೇಜಿನ ಪ್ರಾಂಶುಪಾಲರು ಈತನನ್ನು ಸಮೀಪದ ಅಶೋಕ್ ನಗರ ಠಾಣೆಗೆ ಒಪ್ಪಿಸಿದರು.
ಕಾಲೇಜಿನ ಅಧ್ಯಕ್ಷ ರಂಗ ಅಯ್ಯಂಗಾರ್ ಅವರ ಹೇಳಿಕೆಯಂತೆ ಪುಟ್ಟಣ್ಣ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಆತನ ಕೋರಿಕೆಯಂತೆ ಅವನನ್ನು ಕೆಲಸದಿಂದ ಕೈಬಿಡಲಾಗಿತ್ತು ಎಂದು ಹೇಳಿಕೆ ನೀಡಿದ್ದಾರೆ. ಆರೋಪಿ ಪುಟ್ಟಣ್ಣ, ಚಂದ್ರಲೇಖಾ ಅವರು ನನಗೆ ಬಹಳ ಅವಮಾನ ಮಾಡುತ್ತಿದ್ದರು ಅದಕ್ಕೆ ಈ ರೀತಿಯ ಕೃತ್ಯ ಎಸಗಿದೆ ಎಂದು ಹೇಳಿಕೆ ನೀಡಿದ್ದಾನೆ.
(ದಟ್ಸ್ ಕನ್ನಡ ವಾರ್ತೆ)
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications