ಉಪಪ್ರಾಂಶುಪಾಲರನ್ನು ಕೊಲೆಗೈದ ಮ್ಯಾನೇಜರ್
ಮೈಸೂರು ಜೂ 11: ಇಲ್ಲಿನ ಶಾರದಾ ವಿಲಾಸ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಪುಟ್ಟಣ್ಣ ಎನ್ನುವವರು ಕಾಲೇಜ್ ನ ಉಪಪ್ರಾಂಶುಪಾಲರಾದ ಚಂದ್ರಲೇಖಾ ಎನ್ನುವವರನ್ನು ಕೊಲೆಗೈದಿರುವ ಘಟನೆ ನಿನ್ನೆ ನಡೆದಿದೆ. ಕೆಲಸಕ್ಕೆ ಸರಿಯಾದ ಸಮಯದಲ್ಲಿ ಹಾಜರಾಗದೇ ಇರುವುದು ಮತ್ತು ಕೆಲಸದ ವೇಳೆ ಕಾಲೇಜ್ ನಲ್ಲಿ ಇಲ್ಲದಿರುವ ಕಾರಣಕ್ಕಾಗಿ ಚಂದ್ರಲೇಖ ಅವರು ಪುಟ್ಟಣ್ಣ ಅವರನ್ನು ಕೆಲಸದಿಂದ ವಜಾ ಮಾಡಿದ್ದರು.
ನಿನ್ನೆ 11 ಘಂಟೆಯ ಸುಮಾರಿಗೆ ಉಪಪ್ರಾಂಶುಪಾಲರ ಕಚೇರಿಯಿಂದ ಪುಟ್ಟಣ್ಣ ಅವರಿಗೆ ಕೆಲಸ ವಜಾಗೊಂಡ ಆದೇಶ ತಲುಪಿತು. ಇದರಿಂದ ಕೋಪಗೊಂಡ ಪುಟ್ಟಣ್ಣ ಮೊದಲು ಚಂದ್ರಲೇಖಾ ಅವರ ನಾಲಗೆಯನ್ನು ಕತ್ತರಿಸಿ ನಂತರ ಅವರನ್ನು ಚಾಕುವಿನಿಂದ ತಿವಿದ. ಚಂದ್ರಲೇಖ ಅವರು ತಮ್ಮ ಕೊಠಡಿಯಲ್ಲೇ ಸಾವನ್ನಪ್ಪಿದರು. ವಿಷಯ ತಿಳಿದ ಕಾಲೇಜಿನ ಪ್ರಾಂಶುಪಾಲರು ಈತನನ್ನು ಸಮೀಪದ ಅಶೋಕ್ ನಗರ ಠಾಣೆಗೆ ಒಪ್ಪಿಸಿದರು.
ಕಾಲೇಜಿನ ಅಧ್ಯಕ್ಷ ರಂಗ ಅಯ್ಯಂಗಾರ್ ಅವರ ಹೇಳಿಕೆಯಂತೆ ಪುಟ್ಟಣ್ಣ ಜ್ಞಾಪಕ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಆತನ ಕೋರಿಕೆಯಂತೆ ಅವನನ್ನು ಕೆಲಸದಿಂದ ಕೈಬಿಡಲಾಗಿತ್ತು ಎಂದು ಹೇಳಿಕೆ ನೀಡಿದ್ದಾರೆ. ಆರೋಪಿ ಪುಟ್ಟಣ್ಣ, ಚಂದ್ರಲೇಖಾ ಅವರು ನನಗೆ ಬಹಳ ಅವಮಾನ ಮಾಡುತ್ತಿದ್ದರು ಅದಕ್ಕೆ ಈ ರೀತಿಯ ಕೃತ್ಯ ಎಸಗಿದೆ ಎಂದು ಹೇಳಿಕೆ ನೀಡಿದ್ದಾನೆ.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications