ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸಮರ್ಥ ಸಚಿವರು : ಮತ್ತೆ ಕೆಣಕಿದ ರೇಣುಕಾಚಾರ್ಯ

By Staff
|
Google Oneindia Kannada News

Renukacharya
ಬೆಂಗಳೂರು, ಜೂ. 11 : ಬಂಡಾಯ ಎದ್ದಿರುವ ಈಶ್ವರಪ್ಪ, ರೆಡ್ಡಿ ಸಹೋದರರಿಗಿಂತ ಒಂದು ಹೆಜ್ಜೆ ಮುಂದು ಇಟ್ಟು ಉಗ್ರ ಬಂಡಾಯ ಪ್ರದರ್ಶನಕ್ಕಿಳಿದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ಮತ್ತೆ ಅಸಮರ್ಥ ಸಚಿವರು ಎಂಬ ಆರೋಪದ ಸವಾರಿ ಸವಾರಿ ನಿರಂತರವಾಗಿದೆ ಸಾಗಿದೆ.

ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ಅಸಮರ್ಥ ಸಚಿವರನ್ನು ಕೈಬಿಡಬೇಕು ಎನ್ನುವ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಈ ಇಬ್ಬರು ಶಾಸಕರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಕೆಲವು ಸಚಿವರು ಯಡಿಯೂರಪ್ಪನವರ ವೇಗಕ್ಕೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇತ್ತ ಶಾಸಕರಿಗೂ ಸ್ಪಂದಿಸುತ್ತಿಲ್ಲ. ಇಂತಹ ಅಸಮರ್ಥರಿಂದ ಸರಕಾರಕ್ಕೆ ಕೆಟ್ಟ ಹೆಸರು. ಅವರನ್ನು ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರನ್ನು ಕೈಬಿಡಬೇಕು ಎಂಬುದನ್ನು ಈಗಾಗಲೇ ತಿಳಿಸಿದ್ದೇವೆ. ಉಳಿದ ಬೇಡಿಕೆಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಸಿಎಂ ವಿರುದ್ಧ ನಾವು ಅಪಸ್ವರ ಎತ್ತಿಲ್ಲ. ಮಂತ್ರಿಗಿರಿಯನ್ನು ಕೇಳಿಲ್ಲ. ಹೊರಗಿನಿಂದ ಬಂದವರಿಗೆ ಸಚಿವ ಸ್ಥಾನ ಕೊಡುವುದಕ್ಕೆ ತಮ್ಮ ಸಂಪೂರ್ಣ ವಿರೋಧವಿದೆ. ಪಕ್ಷದ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬುದು ತಮ್ಮ ಅಭಿಪ್ರಾಯ ಎಂದು ಉಭಯ ಶಾಸಕರು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X