ಸಂಸತ್ ದಾಳಿ : ಅಫ್ಜಲ್ ಗುರುಗೆ ಗಲ್ಲೇಕೆ ?
ನವದೆಹಲಿ, ಜೂ. 12 : ಭಾರತದ ಹೃದಯ ಕೇಂದ್ರ ಸಂಸತ್ ಮೇಲೆ ದಾಳಿ ನಡೆಸಿದ್ದ ಪಾಕಿಸ್ತಾನ ಮೂಲದ ಉಗ್ರರ ಮುಖಂಡ ಅಫ್ಜಲ್ ಗುರುನನ್ನು ಹೇಗಾದರು ಮಾಡಿ ಗಲ್ಲು ಶಿಕ್ಷೆಯಿಂದ ಪಾರು ಮಾಡಬೇಕು ಎನ್ನುವ ಪ್ರಯತ್ನಗಳು ನಡೆಯುತ್ತಿವೆಯೇ? ದೇಶದ ಸರ್ವೋಚ್ಚ ನ್ಯಾಯಾಲಯದಿಂದ ನೇಣಿಗೇರಿಸಿ ಎಂದು ಆದೇಶ ಹೊರಬಿದ್ದು ಹಲವು ವರ್ಷಗಳು ಕಳೆದರೂ ಅಫ್ಜಲ್ ಗುರುಗೆ ಶಿಕ್ಷೆ ನೀಡಲು ಕೇಂದ್ರ ಸರಕಾರ ಮನಸ್ಸು ಮಾಡುತ್ತಿಲ್ಲ. ಗುರು ಸೇರಿದಂತೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಒಟ್ಟು 28 ಅಪರಾಧಿಗಳ ತಪ್ಪೊಪ್ಪಿಗೆ ಮನವಿ ರಾಷ್ಟ್ರಪತಿಗಳ ಬಳಿ ಇದೆ. ರಾಷ್ಟಪತಿಗಳಿಂದ ಆ ಮನವಿ ಸರಕಾರಕ್ಕೆ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸರಕಾರ ಹೇಳಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ, ಸಂಸತ್ ಮೇಲೆ ದಾಳಿ ನಡೆಸಿರುವ ಉಗ್ರ ಅಫ್ಜಲ್ ಗುರು ತಪ್ಪೊಪ್ಪಿಗೆ ಮನವಿ ರಾಷ್ಟ್ರಪತಿಗಳ ಮುಂದೆ ಇದೆ. ಗುರು ಹಾಗೂ ಇಂದಿರಾ ಗಾಂಧಿ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಅಪರಾಧಿಗಳು ಸೇರಿ 28 ಮಂದಿ ತಪ್ಪೊಪ್ಪಿಗೆ ಅರ್ಜಿ ರಾಷ್ಟ್ರಪತಿಗಳ ಮುಂದಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಸರಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.
ಉಗ್ರರನ್ನು ರಕ್ಷಣೆ ಮಾಡುವುದಾಗಲಿ, ಬೆಂಬಲಿಸುವುದಾಗಲಿ ಕೇಂದ್ರ ಸರಕಾರ ಮಾಡುತ್ತಿಲ್ಲ. ನಮಗೆ ನಮ್ಮದೇ ಆದ ಕಾನೂನು ಕಟ್ಟಳೆಗಳು ಇವೆ. ಅದನ್ನು ಉಲ್ಲಂಘನೆ ಮಾಡುವಂತಿಲ್ಲ. ಎಲ್ಲವೂ ಕಾನೂನು ಪ್ರಕಾರವೇ ನಡೆಯಬೇಕಾಗುತ್ತದೆ ಎಂದು ಹೇಳಿದರು. ಪಾಕಿಸ್ತಾನದಲ್ಲಿ ಕೂಡಾ ಅನೇಕ ಮಂದಿ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಲ್ಲಿ ಬಹುತೇಕ ಮಂದಿ ಭಾರತೀಯರೂ ಇದ್ದಾರೆ. ಅವರನ್ನು ಏಕಾಏಕಿ ಶಿಕ್ಷೆಗೆ ಗುರಿಪಡಿಸಲು ಸಾಧ್ಯವಾಗುತ್ತದೆಯೇ ಎಂದು ಮೊಯ್ಲಿ ಮರುಪ್ರಶ್ನಿಸಿದ್ದಾರೆ.
(ಏಜನ್ಸೀಸ್)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications