ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಭಿನ್ನಮತದ ಲಾಭ ಪಡೆಯಲ್ಲ, ಎಚ್ಡಿಕೆ

By Staff
|
Google Oneindia Kannada News

HD Kumaraswamy
ಬೆಂಗಳೂರು, ಜೂ.12 : ರಾಜ್ಯ ಬಿಜೆಪಿಯಲ್ಲಿ ದಿನೇದಿನೇ ಉಲ್ಬಣಿಸುತ್ತಿರುವ ಭಿನ್ನಮತದ ಲಾಭವನ್ನು ಪಡೆಯುವ ಸಾಹಸಕ್ಕೆ ಕೈಹಾಕದೆ ಕಾದು ನೋಡುವ ತಂತ್ರವನ್ನು ಸರಿಸುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಈ ಹಿಂದೆ ಬಿಜೆಪಿ ಜೊತೆಗೆ ಅಧಿಕಾರ ಹಂಚಿಕೊಳ್ಳುವ ಅನಿವಾರ್ಯತೆ ಇತ್ತು. ಆದರೆ, ಈಗ ಅಂತಹ ಅನಿವಾರ್ಯತೆ ಇಲ್ಲ ಎಂದರು. ಬಿಜೆಪಿ ಎದ್ದಿರುವ ಭಿನ್ನಮತದ ಲಾಭವನ್ನು ಪಡೆದುಕೊಂಡು ಕಾಂಗ್ರೆಸ್ ಜೊತೆಗೆ ಕೈಜೋಡಿಸಿ ಸರಕಾರ ರಚನೆ ಮಾಡಲು ಜೆಡಿಎಸ್ ಯತ್ನಿಸುತ್ತದೆ ಎನ್ನುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ, ಅಂತಹ ಸಾಹಸಕ್ಕೆ ಜೆಡಿಎಸ್ ಕೈಹಾಕುವುದಿಲ್ಲ. ಅದರ ಅವಶ್ಯಕತೆ ನಮಗಿಲ್ಲ. ಬಿಜೆಪಿಗೆ ಜನರೇ ಬುದ್ಧಿ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಸಂಸದನಾಗಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಬೇರೆ ಬೇರೆ ಮುಖಂಡರನ್ನು ಭೇಟಿ ಮಾಡಬೇಕಾಗುತ್ತದೆ. ಅದಕ್ಕೆಲ್ಲಾ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಪಭ ಸಂಘಟನೆ ದೃಷ್ಟಿಯಿಂದ ಈಗಾಗಲೇ ಎಲ್ಲ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ. ಸದಸ್ಯತ್ವ ನೋಂದಣಿ ಜೂನ್ 15 ರಿಂದ ಆರಂಭಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X